ಸಂಪತ್ತಿಗಾಗಿ ಹೆತ್ತ ತಾಯಿಯನ್ನೇ ಕೊಂದ ಪಾಪಿ ಮಗ

  • In Crime
  • May 2, 2022
  • 473 Views

ಹುಬ್ಬಳಿ: ಕ್ರೂರಿ ಮಗನೊಬ್ಬ ಆಸ್ತಿಗಾಗಿ ಹೆತ್ತ ತಾಯಿಯನ್ನೇ ಹತ್ಯೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಬೆನ್ನೂರು ಗ್ರಾಮದಲ್ಲಿ ನಡೆದಿದೆ.

  

ಶಾಂತವ್ವ ಕಲ್ಲಪ್ಪ ಅಣ್ಣಗೇರಿ (65) ಮಗನಿಂದಲೇ ಕೊಲೆಯಾದ ದುರ್ದೈವಿ. ಬಸವರಾಜ ಕಲ್ಲಪ್ಪ ಅಣ್ಣಗೇರಿ ಕೊಲೆ  ಆರೋಪಿ . ಬಸವರಾಜ ಆಸ್ತಿಗಾಗಿ ಪ್ರತಿನಿತ್ಯ ತಾಯಿಗೆ ಕಿರುಕುಳ ನೀಡುತ್ತಿದ್ದ. ಇಂದು ಆಸ್ತಿಗಾಗಿ ಪೀಡಿಸಿ, ದೊಣ್ಣೆಯಿಂದ ಹೊಡೆದು ತಾಯಿಯನ್ನು ಹತ್ಯೆ ಮಾಡಿದ್ದಾನೆ.

ಸದ್ಯ ಕೊಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಅಣ್ಣೀಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related