ದಾವಣಗೆರೆ : ಮುಂದಿನ ಎರಡುವರೆ ವರ್ಷಗಳವರೆಗೂ ಯಡಿಯೂರಪ್ಪನವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕರಜೋಳ ಹೇಳಿದ್ದಾರೆ.
ಈ ವೇಳೆ ಮಾತನಾಡಿದ ಡಿಸಿಎಂ ಗೋವಿಂದ ಕಾರಜೋಳ, ಬಿ.ಎಸ್. ಯಡಿಯೂರಪ್ಪನವರು ನಮ್ಮ ನಾಯಕ. ಮುಂದಿನ ಎರಡುವರೆ ವರ್ಷ ಅವರೇ ಸಿಎಂ ಆಗಿರುತ್ತಾರೆ ಎಂದು ಸ್ಪಷ್ಟಪಡಿಸಿದರು. ಇನ್ನು ಯಡಿಯೂರಪ್ಪನವರು ಉತ್ತಮ ಕೆಲಸ ಮಾಡುತ್ತಿದ್ದು, ವಲಸಿಗರಿಗೆ ಅನ್ಯಾಯವಾಗಲು ಅವರು ಬಿಡೋದಿಲ್ಲ ಎಂದರು.