ರಮೇಶ್ ಜಾರಕಿಹೊಳಿ ಬೆಂಬಲಿಗರ ಆಕ್ರೋಶ

ರಮೇಶ್ ಜಾರಕಿಹೊಳಿ ಬೆಂಬಲಿಗರ ಆಕ್ರೋಶ

ಬೆಳಗಾವಿ: ರಾಜೀನಾಮೆ ಅಂಗೀಕರಿಸದಂತೆ ಆಗ್ರಹಿಸಿ, ರಮೇಶ್ ಜಾರಕಿಹೊಳಿ ಬೆಂಬಲಿಗರು ಗೋಕಾಕ್‌ನಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಜೀನಾಮೆ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಬೆಂಬಲಿಗ ಆತ್ಮಹತ್ಯೆಗೆ ಯತ್ನ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್‌ನಲ್ಲಿ ನಡೆದಿದೆ. ಈ ವೇಳೆ ಓರ್ವ ಬೆಂಬಲಿಗ ಮೈಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ತಕ್ಷಣ ದೌಡಾಯಿಸಿದ ಪೊಲೀಸರು ಬೆಂಬಲಿಗನನ್ನು ರಕ್ಷಿಸಿದ್ದಾರೆ. ಅಲ್ಲದೇ ಪ್ರತಿಭಟನೆ ನಡೆಸುತ್ತಿದ್ದ ರಮೇಶ್ ಜಾರಕಿಹೊಳಿ ಕೆಲ ಬೆಂಬಲಿಗರನ್ನು ವಶಕ್ಕೆ ಪಡೆದಿದ್ದಾರೆ. ಇದರ ಬೆನ್ನಲ್ಲೇ ಇನ್ನಷ್ಟು ಬೆಂಬಲಿಗರ ಆಕ್ರೋಶ ಮುಗಿಲುಮುಟ್ಟಿದೆ. ಪ್ರತಿಭಟನಾಕಾರರನ್ನು ನಿಂಯತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

Related