ಲೋಕಸಭಾ ಚುನಾವಣೆಗೆ ಟಿಕೆಟ್ ಸಿಕ್ಕಿದ್ದಕ್ಕೆ ನನ್ನ ಕ್ಷೇತ್ರದ ಜನರೇ ಕಾರಣ: ಸುನೀಲ್ ಬೋಸ್

ಲೋಕಸಭಾ ಚುನಾವಣೆಗೆ ಟಿಕೆಟ್ ಸಿಕ್ಕಿದ್ದಕ್ಕೆ ನನ್ನ ಕ್ಷೇತ್ರದ ಜನರೇ ಕಾರಣ: ಸುನೀಲ್ ಬೋಸ್

ಚಾಮರಾಜನಗರ: ಸಮಾಜ ಕಲ್ಯಾಣ ಸಚಿವರಾಗಿರುವಂತ ಎಚ್​ಸಿ ಮಹದೇವಪ್ಪ ಅವರ ಮಗ ಸುನೀಲ್ ಬೋಸ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಈ ಬಾರಿ ಲೋಕಸಭಾ ಚುನಾವಣಾ ಕಣಕ್ಕಿಳಿದಿದ್ದಾರೆ.

ಹೌದು, ಸುನಿಲ್ ಬೋಸ್ ಅವರು ಚಾಮರಾಜನಗರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಈ ಬಾರಿ ಸ್ಪರ್ಧಿಸಿದ್ದಾರೆ. ಈಗಾಗಲೇ ಚಾಮರಾಜನಗರ ಕ್ಷೇತ್ರದಲ್ಲಿ ಬರುವಂತಹ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ ಮತ ಪ್ರಚಾರದಲ್ಲಿ ತೊಡಗಿರುವ ಸುನಿಲ್ ಬೋಸ್ ಅವರು ಇಂದು ಟಿ. ನರಸೀಪುರ ಸೇರಿದಂತೆ ತಾಲ್ಲೂಕಿನ ಟಿ. ದೊಡ್ಡಪುರ, ಹೆಮ್ಮಿಗೆ, ತಲಕಾಡು ಗ್ರಾಪಂ ವ್ಯಾಪ್ತಿಯಲ್ಲಿ ವಿವಿಧೆಡೆ ಮತಯಾಚನೆ ಮಾಡಿದರು.

ಈ ವೇಳೆ ಮಾತನಾಡಿದ ಅವರು, ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಉತ್ತಮ ವಾತಾವರಣವಿದೆ. 2008ರಲ್ಲಿ ರಾಜಕೀಯಕ್ಕೆ ಬಂದ ನನಗೆ ಸಾಕಷ್ಟು ಪ್ರೀತಿಯನ್ನ ಕೊಟ್ಟಿದ್ದೀರಾ. ಇಂದು ಲೋಕಸಭೆ ಟಿಕೆಟ್ ಸಿಕ್ಕಿರುವುದಕ್ಕೂ ನೀವೇ ಕಾರಣ. ನನ್ನ ರಾಜಕೀಯ ಪಯಣದಲ್ಲಿ ಯಾವಾಗಲೂ ಸಹಕಾರ ನೀಡಿದ್ದೀರಾ. ಅದೇ ರೀತಿ ಲೋಕಸಭೆ ಚುನಾವಣೆಯಲ್ಲಿಯೂ ನನಗೆ ಹೆಚ್ಚಿನ ಬಹುಮತ ನೀಡಿ ನಿಮ್ಮ ಸೇವೆ ಮಾಡಲಿಕ್ಕೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.

Related