ನವದೆಹಲಿ, ಜುಲೈ 18 : ನವದೆಹಲಿಯಲ್ಲಿ ನಿಯೋಜನೆಗೊಂಡ ಸಿಕ್ಕಿಂ ಪೊಲೀಸ್ ಸಿಬ್ಬಂದಿ ಇಂದು ತನ್ನ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದಿದ್ದಾರೆ. ಗುಂಡಿನ ದಾಳಿಯಲ್ಲಿ ಮತ್ತೊಬ್ಬ ಯೋಧ ಗಾಯಗೊಂಡಿದ್ದಾರೆ.
ದೆಹಲಿಯ ಹೈದರ್ಪುರ ಪ್ರದೇಶದ ವಾಟರ್ ಪ್ಲಾಂಟ್ನಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಇಂತಹದ್ದೇ ಎರಡು ಹತ್ಯೆಯ ಘಟನೆಗಳು ನಡೆದ ಕೆಲವೇ ದಿನಗಳಲ್ಲಿ ಈ ಘಟನೆ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಯೋಧನೊಬ್ಬ ತನ್ನ ಮೂವರು ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ ಗಾಯಗೊಳಿಸಿದ ಘಟನೆ ಶನಿವಾರ ನಡೆದಿದೆ.