ದೆಹಲಿ: 2019 ಫೆಬ್ರವರಿ 14ರಂದು ದೇಶ ಮರೆಯದ ದಿನವಾಗಿದ್ದು, ಅಂದು ನಮ್ಮ ದೇಶದ 40ಕ್ಕೂ ಹೆಚ್ಚು ಜನ ಸೈನಿಕರು ಹುತಾತ್ಮರಾದ ದಿನವಾಗಿದ್ದು ಇಂದು ನರೇಂದ್ರ ಮೋದಿಯವರು ಹುತಾತ್ಮರಾದ ವೀರ ಯೋಧರನ್ನು ಸ್ಮರಿಸಿದ್ದಾರೆ.
ಪುಲ್ವಾಮಾ ದಾಳಿಗೆ ಐದು ವರ್ಷವಾದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹುತಾತ್ಮರಾದ ವೀರ ಯೋಧರನ್ನು ನೆನಪಿಸಿಕೊಂಡಿದ್ದಾರೆ. 2019ರ ಫೆಬ್ರವರಿ 14 ರಂದು ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶಸ್ತ್ರಸಜ್ಜಿತ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ 78 ಸೇನಾ ವಾಹನಗಳ ಬೆಂಗಾವಲು ಪಡೆಯ ಮೇಲೆ ನಡೆದ ಆತ್ಮಾಹುತಿ ದಾಳಿಯಲ್ಲಿ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (ಸಿಆರ್ಪಿಎಫ್) ನ 40 ಯೋಧರು ಹುತಾತ್ಮರಾಗಿದ್ದರು. ಯುಎಇ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಬುಧವಾರ ಅವರ ತ್ಯಾಗವನ್ನು ನೆನಪಿಸಿಕೊಂಡು ಟ್ವೀಟ್ ಮಾಡಿದ್ದಾರೆ. ಈ ಸೈನಿಕರ ತ್ಯಾಗವನ್ನು ದೇಶವು ಯಾವಾಗಲೂ ನೆನಪಿನಲ್ಲಿ ಇರಿಸಿಕೊಳ್ಳುತ್ತದೆ ಎಂದು ಹೇಳಿದ್ದಾರೆ.
I pay homage to the brave heroes who were martyred in Pulwama. Their service and sacrifice for our nation will always be remembered.
— Narendra Modi (@narendramodi) February 14, 2024