ಬೆಂಗಳೂರು: ಬಿಜೆಪಿ ಸರ್ಕಾರದ ನಿರ್ಲಕ್ಷತನದಿಂದ ಬೆಂಗಳೂರು ನಗರ ಪ್ರವಾಹ ನಿಯಂತ್ರಣವನ್ನು ಕೈಗೊಳ್ಳದಿರುವುದರಿಂದ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರಗಳ ಉದ್ಯಮಿಗಳು ಬೆಂಗಳೂರನ್ನು ಬಿಟ್ಟು ಹೊರಡಲು ಅಣಿಯಾಗುತ್ತಿರುವುದು ದುರದೃಷ್ಟಕರ, ಅತೀ ಹೆಚ್ಚು ತೆರಿಗೆ ಪಾವತಿಸುವ ನಗರ ಬೆಂಗಳೂರಿಗರಿಗೆ ಮೂಲಭೂತ ಸೌಕರ್ಯ ಕಲ್ಪಿಸದೆ, ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಮಾನ ಹರಾಜು ಹಾಕುತ್ತಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಬೆಂಗಳೂರು ಕೇಂದ್ರ, ದಕ್ಷಿಣ ಮತ್ತು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ವತಿಯಿಂದ ಬೃಹತ್ ಪ್ರತಿಭಟನೆ ಯನ್ನು ಹಮ್ಮಿಕೊಂಡಿದೆ.
ಈ ಪ್ರತಿಭಟನೆಯಲ್ಲಿ ಸನ್ಮಾನ್ಯ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಶ್ರೀ ಬಿ.ಕೆ.ಹರಿಪ್ರಸಾದ್ ರವರು, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ಶ್ರೀ ರಾಮಲಿಂಗಾ ರೆಡ್ಡಿ, ಶ್ರೀ ಸಲೀಂ ಅಹಮದ್ ರವರು , ನಗರದ ಸಂಸದರು,ಶಾಸಕರುಗಳು, ಮಾಜಿ ಶಾಸಕರುಗಳು, ಕೆಪಿಸಿಸಿ ಪದಾಧಿಕಾರಿಗಳು ಪಕ್ಷದ ಹಿರಿಯ ಮುಖಂಡರುಗಳು ಭಾಗವಹಿಸುತ್ತಿದ್ದಾರೆ.