ಶೀಘ್ರದಲ್ಲೇ ತೆರೆ ಮೇಲೆ ಅಪ್ಪಳಿಸಲಿದೆ ಸಾರಾಂಶ

ಶೀಘ್ರದಲ್ಲೇ ತೆರೆ ಮೇಲೆ ಅಪ್ಪಳಿಸಲಿದೆ ಸಾರಾಂಶ

ಬೆಂಳೂರು: ಹಾಡುಗಳ ಮೂಲಕವೇ ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿರುವ ಸಾರಾಂಶ ಚಿತ್ರ ಇದೇ ಫೆಬ್ರವರಿ 15ರಂದು ತೆರೆ ಕಾಣಲಿದೆ ಎಂದು ಚಿತ್ರದ ನಿರ್ದೇಶಕರಾಗಿರುವ ಸೂರ್ಯವಸಿಷ್ಟ ಅವರು ಹೇಳಿದ್ದಾರೆ.

ಸೂರ್ಯ ವಸಿಷ್ಠ ಅವರು ನಿರ್ದೇಶನ ಮಾಡುತ್ತಿರುವ ಮೊದಲ ಚಿತ್ರ ಸಾರಾಂಶವಾಗಿದ್ದು ಈ ಚಿತ್ರದ ಮೇಲೆ ಬಹಳ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ

ಸಾರಾಂಶ ಒಂದು ಎಮೋಶನಲ್ ಸಿನಿಮಾವಾಗಿದೆ, ಟ್ರೇಲರ್ ಪ್ರತಿ ಪಾತ್ರದ ಪ್ರಾಮುಖ್ಯತೆಯನ್ನು ತಿಳಿಸುತ್ತದೆ. ನಿರ್ದೇಶಕ ಸೂರ್ಯ ವಸಿಷ್ಠ ಪ್ರಮುಖ ಪಾತ್ರಕ್ಕೆ ಜೀವ ತುಂಬಿದ್ದಾರೆ. ಸಾರಾಂಶ ಸಿನಿಮಾ ಈ ದಿನಮಾನಕ್ಕೆ ಅತ್ಯಂತ ಅಪರೂಪ ಎನಿಸುವ ಗುಣಹೊಂದಿರುವ ಚಿತ್ರ ಇದಾಗಿದೆ.  ತೇಜಸ್ವಿ ಮತ್ತು ದೀಪಕ್ ಸುಬ್ರಮಣ್ಯ ವಿಶಿಷ್ಟ ಪಾತ್ರದ ಮೂಲಕ ಪ್ರೇಕ್ಷಕರನ್ನು ಮುಖಾಮುಖಿಯಾಗಲಿದ್ದಾರೆ. ಶ್ರುತಿ ಹರಿಹರನ್ ಮಾಯಾವಿ ಎಂಬ ಪಾತ್ರದಲ್ಲಿ ಎದುರಾಗಿದ್ದಾರೆ. ಈ ಎಲ್ಲ ಪಾತ್ರಗಳ ಝಲಕ್‌ ಟ್ರೇಲರ್‌ನಲ್ಲಿದೆ.

 

Related