ಯೋಧನ ಹುಟ್ಟೂರಿನಲ್ಲಿ ನಿರವ ಮೌನ

ಯೋಧನ ಹುಟ್ಟೂರಿನಲ್ಲಿ ನಿರವ ಮೌನ

ಬೆಂಗಳೂರು, ಫೆ. 29 : ಕೋಲಾರ ಮೂಲದ ಯೋಧರೊಬ್ಬರು ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರರ ಜೊತೆ ಕಾಳಗದಲ್ಲಿ ಹುತಾತ್ಮರಾಗಿದ್ದಾರೆ.
ಬಂಗಾರ ಪೇಟೆ ಗ್ರಾಮದ 26 ವರ್ಷದ ವೀರ ಯೋಧ ಪ್ರಶಾಂತ್ ಹುತಾತ್ಮ ಯೋಧರಾಗಿದ್ದು, ಸೆವೆಂಟೀನ್ ಮದ್ರಾಸ್ ರೆಜಿಮೆಂಟ್ನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದರು. ಪ್ರಶಾಂತ್ ಎರಡು ದಿನಗಳ ಹಿಂದೆ ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರರೊಂದಿಗಿನ ಕಾಳಗದಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ.
11 ಗಂಟೆಗೆ ವಿಮಾನ ನಿಲ್ದಾಣ ತಲುಪಿದ್ದ ಪಾರ್ಥಿವ ಶರೀರವನ್ನು ಪೊಲೀಸರು ಮತ್ತು ಅಧಿಕಾರಿಗಳು ಸ್ವೀಕರಿಸಿದರು. ಈ ವೇಳೆ ವೀರ ಯೋಧನ ಪಾರ್ಥಿವ ಶರೀರಕ್ಕೆ ಪುಷ್ಪಮಾಲೆಯನ್ನಿಟ್ಟು ವಿಮಾನ ನಿಲ್ದಾಣದ ಪೊಲೀಸ್ ಸಿಬ್ಬಂದಿ ನಮಿಸಿದರು.

Related