ನೀರು ಪಾಲದ ಬಾಲಕರು

ನೀರು ಪಾಲದ ಬಾಲಕರು

ಯಾದಗಿರಿ : ಜಿಲ್ಲೆಯ ವಡೇಗರ ತಾಲೂಕಿನ ಗುರಸಣಗಿ ಬಳಿ ಭೀಮಾ ನದಿಯಲ್ಲಿ ಈಜಲು ಹೋಗಿ ಕೊಚ್ಚಿ ಹೋಗಿದ್ದ ನಾಲ್ವರು ಬಾಲಕರ ಶವ ಪತ್ತೆಯಾಗಿವೆ.

ಎನ್‌ಡಿಆರ್‌ಎಫ್ ತಂಡ, ಅಗ್ನಿಶಾಮಕ ದಳ ಮತ್ತು ನುರಿತ ಮೀನುಗಾರರ ತಂಡಗಳು ಜಂಟಿ ಶೋಧ ಕಾರ್ಯಾಚರಣೆ ನಡೆಸಿ ಭಾನುವಾರ ನದಿಯಲ್ಲಿ ಕೊಚ್ಚಿ ಹೋಗಿದ್ದ ನಾಲ್ವರು ಬಾಲಕರ ಮೃತದೇಹವನ್ನು ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ.

ಹುಡುಗರ ಪತ್ತೆಗಾಗಿ ಸೋಮವಾರ ಬೆಳಗ್ಗೆಯಿಂದ ಹೈದರಾಬಾದಿನ ಎನ್‌ಡಿಆರ್‌ಎಫ್ ಮತ್ತು ಅಗ್ನಿಶಾಮಕ ದಳ ಭೀಮಾನದಿಯಲ್ಲಿ ಬೋಟ್ಗಳ ಮೂಲಕ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ನೀರು ಪಾಲಾಗಿದ್ದ ಅಮಾನ್, ಅಯಾನ್, ರೆಹಾನ್, ಇರ್ಫಾನ್ ಹುಡುಗರ ಶವ ಪತ್ತೆ ಮಾಡಲಾಗಿದೆ.

ವಡಗೇರಾ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Related