ರಾಜ್ಯಕ್ಕೆ ಕಾಂಗ್ರೆಸ್ ನಾಯಕಿ ಬೇಟಿಗೆ ಭರ್ಜರಿ ಸಿದ್ಧತೆ

ರಾಜ್ಯಕ್ಕೆ ಕಾಂಗ್ರೆಸ್ ನಾಯಕಿ ಬೇಟಿಗೆ ಭರ್ಜರಿ ಸಿದ್ಧತೆ

ಬೊಮ್ಮನಹಳ್ಳಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿಯವರು ಕರ್ನಾಟಕ ರಾಜ್ಯಕ್ಕೆ ಇದೇ ಏಪ್ರಿಲ್ 23ರಂದು ಮಂಗಳವಾರ ಭೇಟಿ ನೀಡಲಿದ್ದು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರ ಪರವಾಗಿ ಎಚ್ಎಸ್ಆರ್ ಬಡಾವಣೆಯಲ್ಲಿರುವಂತಹ ವಾಜಪೇಯಿ ಕ್ರೀಡಾಂಗಣದಲ್ಲಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿ ಮತ ಪ್ರಚಾರ ಮಾಡಲಿದ್ದಾರೆ ಎಂದು ಸ್ಥಳೀಯ ಕಾಂಗ್ರೆಸ್ ಅಧ್ಯಕ್ಷರಾಗಿರುವಂತಹ ವಾಸುದೇವ್ ರೆಡ್ಡಿ ಅವರು ಮಾಹಿತಿ ನೀಡಿದ್ದಾರೆ.
ಇಂದು (ಭಾನುವಾರ ಏಪ್ರಿಲ್ 21) ರಂದು ಸಂಜೆ ಸಾರಿಗೆ ಸಚಿವರಾಗಿರುವಂತಹ ರಾಮಲಿಂಗ ರೆಡ್ಡಿ ಅವರು, ಎಐಸಿಸಿ ಪ್ರತಿನಿಧಿಗಳು, ದೆಹಲಿ ಪ್ರತಿನಿಧಿಗಳು ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರುಗಳು ಎಚ್ಎಸ್ಆರ್ ಬಡಾವಣೆಯಲ್ಲಿ ಇರುವಂತಹ ವಾಜಪೇಯ ಕ್ರೀಡಾಂಗಣ ಪರಿಶೀಲನೆ ಮಾಡಿ ಕಾರ್ಯಕ್ರಮದ ಕುರಿತು ಚರ್ಚಿಸಿ ಪರಿಶೀಲನೆ ಮಾಡಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದಂತಹ ಎಂಎಲ್ಸಿ ನಾರಾಯಣಸ್ವಾಮಿ, ಉದಯ್ ಕುಮಾರ್, ಕೆ ರಮೇಶ್, ಬೊಮ್ಮನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಾಸುದೇವ ರೆಡ್ಡಿ ಸೇರಿದಂತೆ ಇನ್ನಿತರ ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.

Related