ಬೆಳಗಾವಿ: ಇಂದು ತೆಲಂಗಾಣದಲ್ಲಿ ನೂತನ ಮುಖ್ಯಮಂತ್ರಿ ಯಾಗಿ ರೇವಂತ ರೆಡ್ಡಿ ಅಧಿಕಾರ ಸ್ವೀಕರಿಸಲಿದ್ದಾರೆ ಈ ಸಮಾರಂಭದಲ್ಲಿ ನಾನು ಕೂಡ ಭಾಗಿಯಾಗುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಇಂದು ಬೆಳಗಾವಿಯ ಸಾಮ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಕ್ಷಿಣ ಭಾರತದಲ್ಲಿ ಬಿಜೆಪಿಯೇ ಇಲ್ಲ ಎಂದರು. ನೀವೇ ಹೇಳಿ ದಕ್ಷಿಣ ಭಾರತದಲ್ಲಿ ಬಿಜೆಪಿ ಎಲ್ಲಿದೆ ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದರು.