ಮುಖ್ಯಮಂತ್ರಿಗಳ ಬಗ್ಗೆ ಪಕ್ಷದಲ್ಲಿ ಯಾವುದೇ ಅಪಸ್ವರವಿಲ್ಲ!

ಮುಖ್ಯಮಂತ್ರಿಗಳ ಬಗ್ಗೆ ಪಕ್ಷದಲ್ಲಿ ಯಾವುದೇ ಅಪಸ್ವರವಿಲ್ಲ!

ಬೆಂಗಳೂರು : ಪಕ್ಷದಲ್ಲಿ ಯಾವುದೇ ಅಪಸ್ವರವಿಲ್ಲ, ಗೊಂದಲಗಳಿಲ್ಲ ಮುಖ್ಯಮಂತ್ರಿಗಳು ತನ್ನ ಜವಬ್ದಾರಿಯನ್ನು ಅತ್ಯುತ್ತಮವಾಗಿ ನಿರ್ವಹಿಸುತ್ತಿದ್ದಾರೆ. ಎಂದು ವಿಧಾನ ಪರಿಷತ್ ಆಡಳಿತ ಪಕ್ಷದ ನಾಯಕ, ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿ, ಕೋಟ-ಪಡುಕರೆಯಲ್ಲಿ ಮೀನುಗಾರಿಕೆ ಇಲಾಖೆಯ ಅನುದಾನದಲ್ಲಿ ಅಭಿವೃದ್ಧಿಗೊಳಿಸಲಾದ ರಸ್ತೆಯ ವೀಕ್ಷಣೆಗೆ ಆಗಮಿಸಿದರು.

ಮುಖ್ಯಮಂತ್ರಿಗಳು ಕೋವಿಡ್ ನಿರ್ವಹಣೆಯಲ್ಲೂ ಅತ್ಯುತ್ತಮವಾದ ಕೆಲಸಗಳನ್ನು ಮಾಡಿದ್ದಾರೆ. ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಬೇಡಿಕೆಗಳು ಬಂದರೆ. ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ರಾಷ್ಟ್ರೀಯ ಅಧ್ಯಕ್ಷರು, ರಾಷ್ಟ್ರೀಯ ನಾಯಕರು ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

Related