ಬಿಜೆಪಿಯವರು ಹೋರಾಟ ಮಾಡಿದರೆ ಏನು ಪ್ರಯೋಜನ ಇಲ್ಲ: ಡಿಕೆಶಿ

ಬಿಜೆಪಿಯವರು ಹೋರಾಟ ಮಾಡಿದರೆ ಏನು ಪ್ರಯೋಜನ ಇಲ್ಲ: ಡಿಕೆಶಿ

ಬೆಳಗಾವಿ: ರಾಜ್ಯದ ಜನತೆಯ ಸಮಸ್ಯೆಗಳ ಪರಿಹಾರಕ್ಕಾಗಿ ನಾವು ಈಗಾಗಲೇ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದ್ದೇವೆ. ಆದರೆ ಬಿಜೆಪಿಯವರು ಸದನದಲ್ಲಿ ಪ್ರಶ್ನೆ ಮಾಡದೆ ಹೊರಗಡೆ ಹೋರಾಟ ಮಾಡಿದರೆ ಏನು ಪ್ರಯೋಜನವಿಲ್ಲವೆಂದು ಡಿಸಿಎಂ ಡಿಪಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಬುಧವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು,

ಬಿಜೆಪಿಯಲ್ಲಿ ಒಗ್ಗಟ್ಟಿಲ್ಲ ಎಂದು ಈಗಾಗಲೇ ಜನರಿಗೆ ಕಂಡು ಬರುತ್ತಿದೆ. ತಮ್ಮ ತಮ್ಮ ನಾಯಕರುಗಳ ವಿರುದ್ಧವೇ ಬಿಜೆಪಿ ನಾಯಕರುಗಳು ಅಸಮಾಧಾನ ಹೊರಹಾಕುತ್ತಿತ್ತು ಇದರಿಂದ ಬಿಜೆಪಿ ಯಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಯಾಗಿದೆ ಎಂದರು.

ಸರಕಾರ ಕೋಟ್ಯಂತರ ರೂ. ಖರ್ಚು ಮಾಡಿ ಸುವರ್ಣಸೌಧ ಕಟ್ಟಿಸಿರುವುದು ಉತ್ತರ ಕರ್ನಾಟಕದ ಸಮಸ್ಯೆಗಳು, ಬರ ಪರಿಸ್ಥಿತಿ ಹಾಗೂ ಸರಕಾರದ ವೈಫಲ್ಯಗಳ ಬಗ್ಗೆ ಸದನದಲ್ಲಿ ಧ್ವನಿ ಎತ್ತಬೇಕು ಎಂದು. ಅವರ ಆಚಾರ, ವಿಚಾರ, ಜನಪರ ಧ್ವನಿಯನ್ನು ಸದನದಲ್ಲಿ ವ್ಯಕ್ತಪಡಿಸಬೇಕು. ಅದನ್ನು ಬಿಟ್ಟು ಹೊರಗೆ ಹೊರಾಟ ಮಾಡುತ್ತೇನೆ ಎಂದರೆ ಯಾರು ಕೇಳುತ್ತಾರೆ? ಅದರಿಂದ ಏನು ಪ್ರಯೋಜನೆ ಎಂದರು.

 

Related