ಪ್ರಚಾರಕ್ಕೆಂದು ಓಡಿ ಬರುತ್ತಾರೆ, ಆದರೆ ಬರ ಪರಿಹಾರ ಕೇಳಿದರೆ ಓಡಿ ಹೋಗುತ್ತಾರೆ: ರಾಮಲಿಂಗಾ ರೆಡ್ಡಿ

ಪ್ರಚಾರಕ್ಕೆಂದು ಓಡಿ ಬರುತ್ತಾರೆ, ಆದರೆ ಬರ ಪರಿಹಾರ ಕೇಳಿದರೆ ಓಡಿ ಹೋಗುತ್ತಾರೆ: ರಾಮಲಿಂಗಾ ರೆಡ್ಡಿ

ಬಾ ಗಲಕೋಟೆ: ಕೇವಲ ಚುನಾವಣೆ ಬಂದಾಗ ಮಾತ್ರ ಕೇಂದ್ರ ಬಿಜೆಪಿ ನಾಯಕರು ಕರ್ನಾಟಕ ರಾಜ್ಯಕ್ಕೆ ಪ್ರಚಾರಕ್ಕೆಂದು ಓಡೋಡಿ ಬರುತ್ತಾರೆ. ಆದರೆ ಕರ್ನಾಟಕ ರಾಜ್ಯಕ್ಕೆ ಬರ ಪರಿಹಾರದ ಹಣ ಬಿಡುಗಡೆ ಮಾಡಿ ಎಂದರೆ ಮಾತ್ರ ಹಿಂದೆ ನೋಡದೆ ಓಡಿ ಹೋಗುತ್ತಾರೆ ಎಂದು ಸರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಕೇಂದ್ರ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡದಿದ್ದ ಕಾರಣ, ಕೋರ್ಟ್ ಮೆಟ್ಟಿಲೇರಬೇಕಾಯಿತು, ಕೋರ್ಟ್ ಮೆಟ್ಟಿಲೇರಿದರು ಕೂಡ ಕರ್ನಾಟಕ ರಾಜ್ಯಕ್ಕೆ ಮತ್ತು ದಕ್ಷಿಣ ಭಾರತಕ್ಕೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆಯಿಂದ ನೋಡುತ್ತಿದೆ ಎಂದು ಆಕ್ರೋಶ ಅವರ ಹಾಕಿದ್ದಾರೆ.

ಇದನ್ನೂ ಓದಿ: ಎಚ್ ಡಿ ರೇವಣ್ಣಗೆ ಬಂಧನದ ಭೀತಿ

ಬೆಂಗಳೂರನ್ನು ಟ್ಯಾಂಕರ್ ಸಿಟಿ ಮಾಡಲಾಗಿದೆ ಎಂದು ಮೋದಿ ಆರೋಪಿಸುತ್ತಾರೆ. ಮಳೆ ಬಾರದಿರುವುದರಿಂದ ಕೊಳವೆಬಾವಿಗಳಲ್ಲಿ ನೀರು ಕಡಿಮೆಯಾಗಿದೆ. ಜನರಿಗೆ ನೀರಿನ ತೊಂದರೆಯಾಗದಂತೆ ಕ್ರಮವಹಿಸಲಾಗಿದೆ. ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆಗೆ ಅನುಮತಿ ನೀಡಿ ಎಂದರೆ ಏಕೆ ನೀಡುತ್ತಿಲ್ಲ ಎಂದು ಪ್ರಶ್ನಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷೆ ಎಸ್.ಜಿ. ನಂಜಯ್ಯನಮಠ, ನಾಗರಾಜ ಹದ್ಧಿ, ಶ್ರೀಧರ ಇದ್ದರು.

Related