ಬೆಂಗಳೂರು: ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ನಿಂದ ಒಂದಾದ ನಿವೇದಿತಾ ಮತ್ತು ಚಂದನ್ ಶೆಟ್ಟಿ ಅವರು ಒಂದಲ್ಲ ಒಂದು ರೀತಿಯಲ್ಲಿ ಆಕ್ಟಿವ್ ಆಗಿ ಇರ್ತಾರೆ. ನಿಜ ಜೀವನದಲ್ಲೂ ದಂಪತಿಯಾಗಿರುವ ಇವರು ಬೆಳ್ಳಿತೆರೆ ಮೇಲು ಜೋಡಿಯಾಗಿ ಮಿಂಚಲಿದ್ದಾರೆ.
ಹೌದು, ಸೈಕೋಥ್ರಿಲ್ಲರ್ ಕಥಾಹಂದರ ಹೊಂದಿರುವ ಆ ಚಿತ್ರಕ್ಕೆ ಪುನೀತ್ ಶ್ರೀನಿವಾಸ್ ಅವರು ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.
ಪುನೀತ್ ಶ್ರೀನಿವಾಸ್ ಕನ್ನಡ ಚಿತ್ರರಂಗಕ್ಕೆ ಹೊಸಬರೇನಲ್ಲ, ಶಿವಣ್ಣ, ಸುದೀಪ್ ರಂಥ ಸ್ಟಾರ್ ಚಿತ್ರಗಳಿಗೆ ಆ್ಯಕ್ಷನ್ ಕಟ್ ಹೇಳಿದ ನಂದಕಿಶೋರ್ ಅವರಬಳಿ ಅಧ್ಯಕ್ಷದಿಂದ ಟಗರು ಚಿತ್ರದವರೆಗೆ (ತೆಲುಗು ಸಿನಿಮಾ ಸೇರಿ) ಸುಮಾರು 12 ವರ್ಷಗಳ ಕಾಲ ಕೆಲಸ ಮಾಡಿ ನಿರ್ದೇಶನದ ಪಾಠ ಕಲಿತು ಇದೀಗ ಮೊದಲಬಾರಿಗೆ ನಿರ್ದೇಶನಕ್ಕಿಳಿಯುತ್ತಿದ್ದಾರೆ.
ಅವರು ತಮ್ಮ ಪ್ರಥಮ ಪ್ರಯತ್ನದಲ್ಲೇ ವಿಭಿನ್ನ ಕಾನ್ಸೆಪ್ಟ್ ಮೂಲಕ ತಮ್ಮ ಹೊಸ ಜರ್ನಿಯನ್ನು ಆರಂಭಿಸುತ್ತಿದ್ದಾರೆ.