ಬೆಂಗಳೂರಿನಲ್ಲಿ ಇದೇ ಮೊಟ್ಟ ಮೊದಲ ಭಾರಿಗೆ ಓಪನ್ ಚೆಸ್ ಪಂದ್ಯಾವಳಿ

ಬೆಂಗಳೂರಿನಲ್ಲಿ ಇದೇ ಮೊಟ್ಟ ಮೊದಲ ಭಾರಿಗೆ ಓಪನ್ ಚೆಸ್ ಪಂದ್ಯಾವಳಿ

ಬೆಂಗಳೂರು: ಬೆಂಗಳೂರಿನಲ್ಲಿಇದೇ ಮೊಟ್ಟ ಮೊದಲ ಭಾರಿಗೆ ನಡೆದ ಅಂತರರಾಷ್ಟ್ರೀಯ ಓಪನ್ ಚೆಸ್ ಪಂದ್ಯಾವಳಿಯನ್ನು ಬೆಂಗಳೂರು ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರರವರು ಉದ್ಘಾಟನೆ ಮಾಡಿದರು.

ಜನವರಿ 18 ರಿಂದ 26 ರವರೆಗೆ ಬೆಂಗಳೂರಿನ ಕಂಠೀರವ ಒಳಾಂಗಣ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಚೆಸ್ ಟೂರ್ನಿಯನ್ನು ಅಖಿಲ ಭಾರತ ಚೆಸ್ ಫೆಡರೇಶನ್ ಮತ್ತು ಇಂಟರ್ನ್ಯಾಷನಲ್ ಚೆಸ್ ಫೆಡರೇಶನ್ ಸಹಯೋಗದಲ್ಲಿ ಬೆಂಗಳೂರು ನಗರ ಜಿಲ್ಲಾ ಚೆಸ್ ಅಸೋಸಿಯೇಷನ್ ಆಯೋಜಿಸುತ್ತಿದೆ.

ಈ ಸಂಧರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ಎಂ. ಎಲ್. ಸಿ ಡಾ. ಕೆ. ಗೋವಿಂದರಾಜ್, ಅಂತರ್ ರಾಷ್ಟ್ರೀಯ ಚೆಸ್ ಚಾಂಪಿಯನ್ ವಿಶ್ವನಾಥ್ ಆನಂದ್ ರವರು,ಬಿ. ಯು. ಡಿ. ಸಿ. ಎ. ಅಧ್ಯಕ್ಷೆ ಸೌಮ್ಯ. ಎಂ. ಯು ರವರು ಹಾಗೂ ಇನ್ನಿತರರು ಉಪಸ್ಥಿತರಿದ್ದರು

Related