ಒಂದೇ ಮರಕ್ಕೆ ಮೂವರು ನೇಣಿಗೆ ಶರಣು..!

  • In Crime
  • July 27, 2022
  • 244 Views
ಒಂದೇ ಮರಕ್ಕೆ ಮೂವರು ನೇಣಿಗೆ ಶರಣು..!

ಭೋಪಾಲ್,ಜು 27: ಒಂದೇ ಮರಕ್ಕೆ ಮೂವರು ಸಹೋದರಿಯರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ನಡೆದಿದೆ.

ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೂವರು ಸಹೋದರಿಯರ ಶವ ಪತ್ತೆಯಾಗಿದ್ದು, ಈ ಘಟನೆ ಖಾಂಡ್ವಾದ ಜವಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಕೊಟ್ಖೇಡಿ ಗ್ರಾಮದಲ್ಲಿ ನಡೆದಿದೆ.

ಮೃತ ಸಹೋದರಿಯರನ್ನು ಸೋನು, ಸಾವಿತ್ರಿ ಮತ್ತು ಲಲಿತಾ ಎಂದು ಗುರುತಿಸಲಾಗಿದ್ದು, ಮೂವರು ಕೂಡ ತಮ್ಮ ತಾಯಿ ಮತ್ತು ಸಹೋದರನೊಂದಿಗೆ ವಾಸಿಸುತ್ತಿದ್ದರು. ಇದೀಗ ಮೂವರು ಸಹೋದರಿಯರು ಸಾವನ್ನಪ್ಪಿದ್ದು ತನ್ನ ತಾಯಿ, ಇಬ್ಬರು ಸಹೋದರಿಯರು ಮತ್ತು ಮೂವರು ಸಹೋದರರನ್ನು ಅಗಲಿದ್ದಾರೆ.

Related