ಗೋದಾಮಿಗೆ ಬೆಂಕಿ

ಗೋದಾಮಿಗೆ ಬೆಂಕಿ

ಬೆಂಗಳೂರು, ಫೆ. 14 : ಫರ್ನೀಚರ್ ತುಂಬಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಗೋದಾಮು ಏಕಾಏಕೀ ಹೊತ್ತಿ ಉರಿದಿರುವ ಘಟನೆ ಇಲ್ಲಿನ ಹೆಗಡೆ ನಗರದಲ್ಲಿ ಗುರುವಾರ ತಡರಾತ್ರಿ ನಡೆದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ 8 ಅಗ್ನಿಶಾಮಕ ವಾಹನಗಳು ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ. ದಾಮೋದರ್ ಎಂಬುವವರಿಗೆ ಸೇರಿದ ಶ್ರೀರಂಗ ಫರ್ನೀಚರ್ಸ್ ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, 12 ಮಂದಿ ಕೆಲಸಗಾರರು ಗೋದಾಮಿನಲ್ಲಿ ಮಲಗಿದ್ದರು ಎನ್ನಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Related