ನಟ ದರ್ಶನ್ ಗೆ ಇಂದು ಮಹತ್ವದ ದಿನ; ಯಾಕೆ ಗೊತ್ತಾ..?

ನಟ ದರ್ಶನ್ ಗೆ ಇಂದು ಮಹತ್ವದ ದಿನ; ಯಾಕೆ ಗೊತ್ತಾ..?

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ನಟ ದರ್ಶನ್ ಮತ್ತು ಪವಿತ್ರ ಗೌಡ ಸೇರಿದಂತೆ 17 ಜನ ಆರೋಪಿಗಳು ಈಗಾಗಲೇ ಜೈಲು ಸೆರೆವಾಸ ಅನುಭವಿಸುತ್ತಿದ್ದು, ವಿಚಾರಣೆಗಾಗಿ ಈಗಾಗಲೇ ನ್ಯಾಯಾಲಯಕ್ಕೆ ಹಾಜರಾಗುತ್ತಿದ್ದು ಇಂದು ದರ್ಶನ್ ಅಂಡ್ ಗ್ಯಾಂಗ್ ನ್ಯಾಯಾಲಯಕ್ಕೆ ಹಾಜರಾಗುತ್ತಿಲ್ಲ. ಇದನ್ನೂ ಓದಿ:ಎಲ್ಲಾ ಹಗರಣಗಳು ನಡೆದಿರುವುದು ಬಿಜೆಪಿ ಕಾಲದಲ್ಲಿ: ಡಿಸಿಎಂ

ಇಂದು (ಜುಲೈ 4) ಎಲ್ಲರ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಳ್ಳಲಿದೆ. ಹೀಗಾಗಿ, ದರ್ಶನ್ ಹಾಗೂ ಅವರ ಟೀಂ ಕೋರ್ಟ್​ಗೆ ಹಾಜರಾಗಬೇಕಿತ್ತು. ಆದರೆ, ಇಂದು ದರ್ಶನ್ ಅವರು ನೇರವಾಗಿ ಕೋರ್ಟ್​ಗೆ ಬರುತ್ತಿಲ್ಲ, ಬದಲಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ಎದುರಿಸಲಿದ್ದಾರೆ.

ದರ್ಶನ್ ಅವರನ್ನು ಬಂಧಿಸಿ ತಿಂಗಳಾಗುತ್ತಾ ಬಂದಿದೆ. ಮೊದಲು ಕೆಲವು ದಿನ ದರ್ಶನ್ ಅವರನ್ನು ತೀವ್ರವಾಗಿ ವಿಚಾರಣೆ ಮಾಡಲಾಯಿತು. ಆ ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಈಗ ದರ್ಶನ್ ಅವರು ಕೇಂದ್ರ ಕಾರಾಗೃಹದಲ್ಲಿ ಕಂಬಿ ಎಣಿಸುತ್ತಿದ್ದಾರೆ. ಇಂದು ಅವರ ಪಾಲಿಗೆ ಮಹತ್ವದ ದಿನ ಆಗಿದೆ. ಅವರು ಜೈಲಿನಿಂದ ಹೊರ ಬರುತ್ತಾರೋ ಅಥವಾ ಜೈಲಿನಲ್ಲಿ ಉಳಿಯುತ್ತಾರೋ ಎಂಬುದು ತಿಳಿಯಲಿದೆ.

 

Related