ಇಂದು ರಾಜ್ಯಕ್ಕೆ ರಾಹುಲ್ ಗಾಂಧಿ ಎಂಟ್ರಿ

ಇಂದು ರಾಜ್ಯಕ್ಕೆ ರಾಹುಲ್ ಗಾಂಧಿ ಎಂಟ್ರಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ನಾಯಕ ರಾಹುಲ್ ಗಾಂಧಿ ಇಂದು (ಏಪ್ರಿಲ್ 17 ಬುದುವಾರ) ಕರ್ನಾಟಕ ರಾಜ್ಯದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೂಸ್ಟ್ ನೀಡಲು ರಾಜ್ಯಕ್ಕೆ ಎಂಟ್ರಿ ನೀಡಿದ್ದಾರೆ.

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಸುಮಾರು 18ರಿಂದ 20 ಕ್ಷೇತ್ರ ಗೆಲ್ಲುವ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ ಇನ್ನಷ್ಟು ಗೆಲುವಿನ ಹುಮ್ಮಸ್ಸು ತುಂಬಲು ಕಾಂಗ್ರೆಸ್ನ ನಾಯಕ ಇಂದು ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತ ಪ್ರಚಾರದಲ್ಲಿ ತೊಡಗಲಿದ್ದಾರೆ. ಇದಾದ ಬಳಿಕ ಕಾಂಗ್ರೆಸ್ನ ಬೃಹತ್ ಸಮಾವೇಶದಲ್ಲಿ ರಾಹುಲ್ ಗಾಂಧಿಯವರು ಭಾಗಿಯಾಗಲಿದ್ದಾರೆ.

ರಾಜ್ಯಕ್ಕೆ ಮೋದಿ ಆಗಮನಕ್ಕೂ ಕೌಂಟರ್​ ಕೊಡಲು ಇಂದು ರಾಹುಲ್ ಗಾಂಧಿಯವರನ್ನ ಅಖಾಡಕ್ಕೆ ಇಳಿಯಲ್ಲಿದ್ದಾರೆ. ಇಂದು ಮಧ್ಯಾಹ್ನ 1.20ಕ್ಕೆ ರಾಹುಲ್​ ಗಾಂಧಿ   ಕೇರಳದಿಂದ ಬೆಂಗಳೂರಿನ ಹೆಚ್​ಎಎಲ್​​ಗೆ ಆಗಮಿಸಲಿದ್ದಾರೆ.. ಅಲ್ಲಿಂದ ಮಂಡ್ಯಕ್ಕೆ ತೆರಳಲಿದ್ದು, ಸಾರ್ವಜನಿಕ ಸಭೆಯಲ್ಲಿ ಭಾಗಿ ಆಗಲಿದ್ದಾರೆ. ತಮ್ಮ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ನಂತರ ಅಲ್ಲಿಂದ ಮಧ್ಯಾಹ್ನ 3.30ಕ್ಕೆ ಹೆಲಿಕಾಪ್ಟರ್​ ಮೂಲಕ ಕೋಲಾರಕ್ಕೆ ತೆರಳಲಿದ್ದಾರೆ. ಅಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿ ಮತಬೇಟೆಯಾಡಲಿದ್ದಾರೆ.

 

Related