ಜಿಲ್ಲೆಯಲ್ಲಿ ಧಾರಾಕಾರ ಮಳೆ : ಪ್ರವಾಹ ಭೀತಿ

ಜಿಲ್ಲೆಯಲ್ಲಿ ಧಾರಾಕಾರ ಮಳೆ : ಪ್ರವಾಹ ಭೀತಿ

ಬೆಳಗಾವಿ : ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಎದುರಿಸಿದ್ದ ಜನರಿಗೆ ಮತ್ತೆ ಆತಂಕ ಶುರುವಾಗಿದೆ. ಕಳೆದ ನಾಲ್ಕು ದಿನಗಳಿಂದಲೂ ಮಳೆ ಅಬ್ಬರಿಸುತ್ತಿದ್ದು, ನದಿ ಪಾತ್ರದ ಗ್ರಾಮಗಳಿಗೆ ಮತ್ತೆ ಪ್ರವಾಹದ ಭೀತಿ ಕಾಡುತ್ತಿದೆ.

ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ ಹುಬ್ಬಳ್ಳಿ ಗ್ರಾಮದ ಹೊರ ವಲಯದಲ್ಲಿ ಹಾದು ಹೋಗುವ ಮಲಪ್ರಭಾ ನದಿ ದಂಡೆ ಮೇಲೆ ಶರಣೆ ಗಂಗಾಂಬಿಕಾ ಐಕ್ಯ ಮಂಟಪ ಮುಳುಗುವ ಸಾಧ್ಯತೆ ಇದೆ. ನದಿ ತೀರದ ಜಮೀನುಗಳಿಗೆ ನೀರು ನುಗ್ಗುತ್ತಿದ್ದು, ಜಲಾವೃತವಾಗುತ್ತಿವೆ. ರೈತರಿಗೆ ಬೆಳೆ ಕಳೆದುಕೊಳ್ಳುವ ಆತಂಕ ಎದುರಾಗಿದೆ.

ನವಿಲು ತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ಇನ್ನಷ್ಟು ನೀರು ಬಿಡುವ ಸಾಧ್ಯತೆ ಇದೆ. ನದಿಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ತಾಲೂಕಾಡಳಿತ ಸೂಚನೆ ನೀಡಲಾಗಿದೆ.

Related