ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ ಸಾರಿಗೆ ಸಚಿವರು

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ ಸಾರಿಗೆ ಸಚಿವರು

ಬೆಂಗಳೂರು,ಸೆ.15: ಬಿಎಂಟಿಸಿಯಲ್ಲಿ ಖಾಲಿ ಇರುವಂತ 15 ಸಾವಿರ ಹುದ್ದೆಗಳಿಗೆ ಶೀಘ್ರವೇ ಭರ್ತಿ ಮಾಡಿಕೊಳ್ಳಲಾಗುತ್ತದೆ. ಬೆಂಗಳೂರಿನ ಕೆಂಗೇರಿ ಉಪ ನಗರದಲ್ಲಿ ನಿರ್ಮಾಣವಾಗುತ್ತಿರುವ ನೂತನ ಬಸ್ ನಿಲ್ದಾಣ ಕಾಮಗಾರಿ ಪರಿಶೀಲನೆ ಬಳಿಕ ಮಾತನಾಡಿದಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ನೂತನ ಬಸ್ ನಿಲ್ದಾಣವನ್ನು ಅಗತ್ಯ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿ ಪಡಿಸಿ, ಮುಂದಿನ ವರ್ಷ ಜನವರಿ ವೇಳೆಗೆ ಸಾರ್ವಜನಿಕರ ಬಳಕೆಗೆ ದೊರಕಿಸೋ ಪ್ರಯತ್ನ ಮಾಡಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಬಿಎಂಟಿಸಿಯ 15 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದ್ದು, 28 ಕ್ಷೇತ್ರಗಳಲ್ಲಿ 2,200 ಬಸ್ ಗಳನ್ನು ರಸ್ತೆಗೆ ಇಳಿಸೋದಕ್ಕೆ ಸನ್ನದ್ಧರಾಗಿದ್ದೇವೆ ಎಂದು ತಿಳಿಸಿದರು.

Related