ತುಳು ಅಕಾಡೆಮಿ ಪ್ರಶಸ್ತಿ ಆಮಂತ್ರಣ ಪತ್ರಿಕೆ ಬಿಡುಗಡೆ

ತುಳು ಅಕಾಡೆಮಿ ಪ್ರಶಸ್ತಿ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಂಗಳೂರು : ಬೆಂಗಳೂರಿನಲ್ಲಿ ಮಾರ್ಚ್ 7ರಂದು ನಡೆಯಲಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿ, ತುಳು ಅಕಾಡೆಮಿಯ ಕಾರ್ಯ ಚಟುವಟಿಕೆಗಳು ಉತ್ತಮವಾಗಿ ನಡೆಯುತ್ತಿದೆ. ಕೋವಿಡ್ ಸಂದರ್ಭದಲ್ಲಿಯೂ ಕಲಾವಿದರಿಗೆ ಆಸರೆಯಾಗುವ ಮೂಲಕ ಮಾದರಿಯಾಗಿದ್ದೀರಿ. ಬೆಂಗಳೂರಿನ ನಗರದಲ್ಲಿ ತುಳು ಭಾಷಾ ಪ್ರಶಸ್ತಿ ಸಮಾರಂಭ ಆಯೋಜಿಸಿರುವುದು ಶ್ಲಾಘನೀಯ. ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ಮೀನುಗಾರಿಕಾ ಹಾಗೂ ಬಂದರುಗಳ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ ಶುಭ ಹಾರೈಸಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್ , ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಸಮಾರಂಭದ ಸದಸ್ಯ ಸಂಚಾಲಕಿ ಕಾಂತಿ ಶೆಟ್ಟಿ ಬೆಂಗಳೂರು ಉಪಸ್ಥಿತರಿದ್ದರು.

Related