ಕಳಪೆ ಯಂತ್ರೋಪಕರಣ: ಶಾಸಕರು ಗರಂ

ಕಳಪೆ ಯಂತ್ರೋಪಕರಣ: ಶಾಸಕರು ಗರಂ

ತುಮಕೂರು : ಕಳಪೆ ಉಪಕರಣಗಳನ್ನು ಸರಬರಾಜು ಮಾಡಿದ ಕಂಪನಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಾಸಕ ಡಿ.ಸಿ.ಗೌರಿಶಂಕರ್ ಆಗ್ರಹಿಸಿದ್ದಾರೆ.

ತಾಲ್ಲೂಕಿನ ಊರ್ಡಿಗೆರೆ ಗ್ರಾಮದಲ್ಲಿ ರಿಯಾಯಿತಿ ದರದಲ್ಲಿ ರೈತರಿಗೆ ಪೂರ್ವ ಮುಂಗಾರಿನ ಶೇಂಗಾ ಸೇರಿದಂತೆ ಇತರೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಿಸಿ ಮಾತನಾಡಿದ ಶಾಸಕ ಡಿ.ಸಿ.ಗೌರಿಶಂಕರ್ ಅವರು, ಕಳಪೆ ಕೃಷಿ ಉಪಕರಣಗಳನ್ನು ಸರಬರಾಜು ಮಾಡಿದ ಬಾಡಿಗೆ ಕೃಷಿ ಉಪಕರಣಗಳ ವಿತರಕರನ್ನು ಕಪ್ಪುಪಟ್ಟಿಗೆ ಸೇರಿಸಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಕೃಷಿ ಅಧಿಕಾರಿಗೆ ತಾಕೀತು ಮಾಡಿದ್ದಾರೆ. ಕೂಡಲೇ ರೈತರಿಗೆ ತೊಂದರೆಯಾಗದಂತೆ ಉತ್ತಮ ಗುಣಮಟ್ಟದ ಕೃಷಿ ಯಂತ್ರೋಪಕರಣಗಳನ್ನು ವಿತರಿಸುವಂತೆ ಸೂಚಿಸಿದರು.

ರೈತರೇ ದೇಶದ ಬೆನ್ನೆಲುಬು ಅಂತಹ ರೈತರಿಗೆ ಕಳಪೆ ಗುಣಮಟ್ಟದ ಕೃಷಿ ಯಂತ್ರೋಪಕರಗಳನ್ನು ಸರಬರಾಜು ಮಾಡಿರುವ ಏಜೆನ್ಸಿ ವಿರುದ್ಧ ಕ್ರಮ ಕೈಗೊಂಡು ಅವರನ್ನು ಕಪ್ಪುಪಟ್ಟಿಗೆ ಸೇರಿಸಿ, ರೈತರ ಕೃಷಿ ಚಟುವಟಿಕೆಗಳಿಗೆ ಸಮಸ್ಯೆಯಾಗದಂತೆ ಗುಣಮಟ್ಟದ ಯಂತ್ರೋಪಕರಗಳನ್ನು ತಕ್ಷಣ ನೀಡಲು ಕ್ರಮ ವಹಿಸಬೇಕೆಂದು ಸೂಚನೆ ನೀಡಿದರು.

Related