ದರ್ಶನ್ ಗೆ ಸೈಲೆಂಟಾಗಿ ಟಾಂಗ್ ನೀಡಿದ ಉಮಾಪತಿ

ದರ್ಶನ್ ಗೆ ಸೈಲೆಂಟಾಗಿ ಟಾಂಗ್ ನೀಡಿದ ಉಮಾಪತಿ

ಬೆಂಗಳೂರು: ಕಾಟೇರ ಚಿತ್ರದ 50 ದಿನಗಳ ಪೂರೈಕೆಯ ಸಂಭ್ರಮಾಚರಣೆಯನ್ನು ಇಂದು (ಫೆ.20 ಮಂಗಳವಾರ) ಬೆಂಗಳೂರಿನ ಪ್ರಸನ್ನ ಥಿಯೇಟರ್ ಮುಂದುಗಡೆ ಏರ್ಪಾಡು ಮಾಡಲಾಗಿದ್ದು ಈ ಸಂದರ್ಭದಲ್ಲಿ ನಟ ದರ್ಶನ್ ಅವರು ಉಮಾಪತಿ ಅವರ ವಿರುದ್ಧ ಕಠೋರವಾಗಿ ಮಾತನಾಡಿದ್ದಾರೆ.

ಇನ್ನು ಈ ಸಂಬಂಧ ಪ್ರತಿಕ್ರಿಯೆ ನೀಡಿದ ನಿರ್ಮಾಪಕ ಉಮಾಪತಿಯವರು, ನಾವು ತಗಡುಗಳೆ. ನಮಗೆ ಗತಿ ಇಲ್ಲದೆ ನಾವು ಗುಡಿಸಿಲಲ್ಲಿ ಬದುಕುತ್ತಿದ್ದೇವೆ ಅವರು ರಾಜರು ಅರಮನೆಯಲ್ಲಿ ಬದುಕುತ್ತಿದ್ದಾರೆ ಎಂದು ಸೈಲೆಂಟಾಗಿ ನಿರ್ಮಾಪಕ ಉಮಾಪತಿಯವರು ದರ್ಶನ್ ತೂಗುದೀಪ್ ಅವರಿಗೆ ಟೈಮ್ ಕೊಟ್ಟಿದ್ದಾರೆ.

ಕಾಟೇರ ಸಿನಿಮಾದ 50 ದಿನ ಪೂರೈಸಿದ ಖುಷಿಯಲ್ಲಿ ಪ್ರಸನ್ನ ಚಿತ್ರಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ನಟ ದರ್ಶನ್, ಮಾಜಿ ಗೆಳೆಯ ಉಮಾಪತಿ ಶ್ರೀನಿವಾಸ್ ಅವರನ್ನುದ್ದೇಶಿಸಿ ಕೆಲ ಕಠು ಪದಗಳನ್ನು ಬಳಸಿದ್ದರು. ‘ಕಾಟೇರ’ ಸಿನಿಮಾದ ಕತೆಯನ್ನು ತಾವು ಮಾಡಿಸಿದ್ದಾಗಿ ಉಮಾಪತಿ ಶ್ರೀನಿವಾಸ್ ವಿನಯದಿಂದಲೇ ಈ ಹಿಂದೆ ಹೇಳಿದ್ದರು. ಆದರೆ ಅದನ್ನು ಅಪಮಾನವೆಂಬಂತೆ ತೆಗೆದುಕೊಂಡಂತಿರುವ ದರ್ಶನ್, ಉಮಾಪತಿಯನ್ನುದ್ದೇಶಿಸಿ ‘ತಗಡು’ ಇನ್ನಿತರೆ ಕಠು ಪದಗಳನ್ನು ಬಳಸಿ ನಿಂದಿಸಿದ್ದಾರೆ. ಅಲ್ಲದೆ ‘ಕಾಟೇರ’ ಸಿನಿಮಾದ ಟೈಟಲ್ ರಿಜಿಸ್ಟರ್ ತಾವೇ ಮಾಡಿಸಿದ್ದಾಗಿಯೂ ಹೇಳಿದರು.

ತಮ್ಮ ಬಗ್ಗೆ ದರ್ಶನ್ ಆಡಿರುವ ಮಾತುಗಳ ಬಗ್ಗೆ ಪ್ರತಿಕ್ರಿಯಿಸಿರುವ ನಿರ್ಮಾಪಕ ಉಮಾಪತಿ ಶ್ರೀನಿವಾಸ್, ‘ಅವರಿಗೆ ಉತ್ತರ ಕೊಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ನಾವೆಲ್ಲ ತಗಡುಗಳು ತಗಡುಗಳಾಗೇ ಇರಬೇಕಲ್ವ? ‘ರಾಬರ್ಟ್’ ಸಿನಿಮಾ ಅವರದ್ದೇ, ಅವರೇ ಕತೆ ಕೊಟ್ಟರು ದುಡ್ಡು ಅವರೇ ಹಾಕಿದರು. ನಿರ್ಮಾಪಕನೂ ನಾನಲ್ಲ, ನಾನು ಡಮ್ಮಿ ನಿರ್ಮಾಪಕ ಆಗಿದ್ದೆ. ಅವರೆಲ್ಲ ದೊಡ್ಡ ವ್ಯಕ್ತಿಗಳು, ಮಾತನಾಡಿದ್ದಾರೆ, ಮಾತನಾಡಲಿ ಬಿಡಿ,’ ಎಂದು ಟಾಂಗ್ ನೀಡಿದರು.

Related