ದೆಹಲಿ ಸಿಎಂ ವಿರುದ್ಧ ಕೇಂದ್ರ ಸಚಿವ ವಾಗ್ದಾಳಿ

ದೆಹಲಿ ಸಿಎಂ ವಿರುದ್ಧ ಕೇಂದ್ರ ಸಚಿವ ವಾಗ್ದಾಳಿ

ಹುಬ್ಬಳ್ಳಿ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರ ಮೇಲೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಆರೋಪಗಳ ಮೇಲೆ ಆರೋಪ ಮಾಡಿ ಅವರನ್ನು ಹಲವಾರು ದಿನಗಳ ಕಾಲ ಬಂಧನದಲ್ಲಿ ಇಡಲಾಯಿತು. ನಂತರ ಕ್ರೇಜಿ ಬಾಲ್ ಅವರು ಹೇಗೋ ಬೇಲು ಮೂಲಕ ಹೊರ ಬಂದಿದ್ದಾರೆ.  ಇದನ್ನೂ ಓದಿ: ಬಾಲಕಿಯರ ವಸತಿ ನಿಲಯಕ್ಕೆ ಜಮೀರ್ ಅಹ್ಮದ್ ದಿಡೀರ್ ಎಂಟ್ರಿ

ಇನ್ನು ದೆಹಲಿ ಸಿಎಂ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ವಾಗ್ದಾಳಿ ನಡೆಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಆಗಿರಲು ಅರವಿಂದ ಕೇಜ್ರಿವಾಲ್ ಅವರಿಗೆ ಯೋಗ್ಯತೆ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣದಲ್ಲಿ ನೈತಿಕ ಹೊಣೆ ಹೊತ್ತು ಕೇಜ್ರಿವಾಲ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಎಎಪಿ ಯಾವುದೇ ತತ್ವಗಳಿಲ್ಲದ ಪಕ್ಷವಾಗಿದೆ. ಭ್ರಷ್ಟಾಚಾರ, ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ಧ ಬಂಡಾಯವೆದ್ದು ಅಸ್ತಿತ್ವಕ್ಕೆ ಬಂದ ಪಕ್ಷ ಇಂದು ತಾನೇ ಆ ಹಾದಿ ತುಳಿದಿದೆ ಎಂದು ಜೋಶಿ ಆರೋಪಿಸಿದರು.

 

Related