ಇಂಡಿಯಾ ಒಕ್ಕೂಟ, ಕಾಂಗ್ರೆಸ್‍ಗೆ ಮರ್ಮಾಘಾತ ಆಗಿದೆ: ವಿಜಯೇಂದ್ರ

ಇಂಡಿಯಾ ಒಕ್ಕೂಟ, ಕಾಂಗ್ರೆಸ್‍ಗೆ ಮರ್ಮಾಘಾತ ಆಗಿದೆ: ವಿಜಯೇಂದ್ರ

ಬೆಂಗಳೂರು: ಇತ್ತೀಚಿನ ನಡೆದ ಪಂಚ ರಾಜಕೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಬಹುಮತದಿಂದ ಗೆದ್ದು 4 ರಾಜ್ಯಗಳಲ್ಲಿ ತನ್ನ ಅಧಿಕಾರದ ಗದ್ದುಗೆ ಹಿಡಿದಿದೆ ಎಂದು ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಹೇಳಿದರು.

ನಗರದಲ್ಲಿಂದು ಹೋಟೆಲ್ ಒಂದರಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಂಚ ರಾಜಕೀಯ ಚುನಾವಣೆಯ ಕಾಂಗ್ರೆಸ್ ಪಕ್ಷದ ಬೆವರಹಿಸುವ ಕೆಲಸವನ್ನು ಮಾಡಿದೆ ಹಾಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾವು 28 ಕ್ಷೇತ್ರಕ್ಕೆ 28 ಕ್ಷೇತ್ರ ಗೆಲ್ಲಬೇಕೆಂದು ಬಿಜೆಪಿ ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ.

ಈ ಮೂಲಕ ಇಂಡಿಯಾ ಒಕ್ಕೂಟ, ಕಾಂಗ್ರೆಸ್‍ಗೆ ಮರ್ಮಾಘಾತ ಆಗಿದೆ. ಇದೊಂದು ಸ್ಪಷ್ಟ ಸಂದೇಶವಾಗಿದೆ ಎಂದರು.

ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ ಇದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲು ರಾಜ್ಯದ ಮತದಾರರು ಸಜ್ಜಾಗಿದ್ದಾರೆ. ಬಿಜೆಪಿ, ಸಂಘಟನೆಗೆ, ಪೂರಕ ಕ್ರಮಗಳನ್ನು ಪಕ್ಷ ಕೈಗೊಳ್ಳಲಿದೆ. ಪಕ್ಷವು ರಾಜ್ಯದಲ್ಲಿ ಎಲ್ಲ 28 ಸ್ಥಾನಗಳನ್ನೂ ಗೆಲ್ಲಲಿದೆ. ಇದಕ್ಕಾಗಿ ಎಲ್ಲರೂ ಶ್ರಮಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತಿತರರು ಪಾಲ್ಗೊಂಡಿದ್ದರು.

 

Related