ಔರಾದ : ತಾಲ್ಲೂಕಿನ ಶಂಬೆಳ್ಳಿ ಗ್ರಾ. ಪಂ. ಕುಡಿಯುವ ನೀರಿನ ಘಟಕ ಬಂದಾಗಿ ಆರು-ಏಳು ತಿಂಗಳ ಕಳೆದಿದ್ದು, ಇಲ್ಲಿಯ ತನಕ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಅಧಿಕಾರಿಗಳು ಸರಿಪಡಿಸಿಲ್ಲ. ಇದನ್ನು ಸರಿಪಡಿಸಿ ಎಂದು ಎಸ್.ಡಿ.ಎಂ.ಸಿ ಸದಸ್ಯರು ಆನಂದ ತಂದೆ ವಿಠಲ ಶಂಬೆಳ್ಳಿ ಬುಧವಾರ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಅಧಿಕಾರಿಗಳ ನಿಷ್ಕಾಳಜಿಯಿಂದ ಜನರಿಗೆ ಮಳೆಗಾಲದಲ್ಲಿ ಶುದ್ಧ ನೀರಿನ ವ್ಯವಸ್ಥೆ ಮಾಡದೆ ಬೇಜವಾಬ್ದಾರಿ ತೋರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.