ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಸನ್ 10 ಸ್ಪರ್ಧೆಯಾಗಿ ಆಯ್ಕೆಗೊಂಡು ಎರಡು ವಾರಗಳ ಬಿಗ್ ಬಾಸ್ ಮನೆಯಲ್ಲಿದ್ದ ವರ್ತುರ್ ಸಂತೋಷನನ್ನು ಹುಲಿ ಉಗುರು ಧರಿಸಿರುವುದನ್ನು ಖಂಡಿಸಿ ಅರಣ್ಯಾಧಿಕಾರಿಗಳು ವರ್ತೂರ್ ಸಂತೋಷನನ್ನು ಬಂಧಿಸಿದ್ದರು.
ಇನ್ನು ಇಂದು (ಶುಕ್ರವಾರ) ವರ್ತೂರು ಸಂತೋಷ್ಗೆ ಜಾಮೀನು ಮಂಜೂರಾಗಿದೆ. 2ನೇ ಎಸಿಜೆಎಂ ನ್ಯಾಯಾಲಯ 4 ಸಾವಿರ ನಗದು ಶ್ಯೂರಿಟಿ ಅಥವಾ ಒಬ್ಬ ವ್ಯಕ್ತಿಯ ಶ್ಯೂರಿಟಿ, ತನಿಖಾಧಿಕಾರಿಗಳು ಸೂಚಿಸಿದಾಗ ವಿಚಾರಣೆಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಿ ಜಮೀನು ಮಂಜೂರು ಮಾಡಿದೆ.
ಜಾಮೀನು ಸಿಕ್ಕಿದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಸಂತೋಷ್ ಇಂದು ಸಂಜೆ 7 ಗಂಟೆ ಬಳಿಕ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.
ಹಳ್ಳಿಕಾರ್ ರಾಸುಗಳ ರಕ್ಷಣೆಯ ಮೂಲಕ ಗುರುತಿಸಿಕೊಂಡಿದ್ದ ಸಂತೋಷ್ ಅವರು 10ನೇ ಅವೃತ್ತಿಯ ಬಿಗ್ ಬಾಸ್ ಮನೆಗೆ ಸ್ಪರ್ಧಿಯಾಗಿ ಪ್ರವೇಶ ಮಾಡಿದ್ದರು.
ಕುತ್ತಿಗೆಯಲ್ಲಿ ಸಂತೋಷ್ ಹುಲಿಯ ಉಗುರು ಇರುವ ಲಾಕೆಟ್ ಹಾಕಿಕೊಂಡಿದ್ದರು. ಈ ಕಾರಣಕ್ಕೆ ಬಿಗ್ ಬಾಸ್ ಮನೆಯಿಂದ ಹೊರ ಕರೆತಂದು ರಾಮೋಹಳ್ಳಿ ಅರಣ್ಯಾಧಿಕಾರಿಗಳು ಸಂತೋಷ್ ಅವರನ್ನು ಬಂಧಿಸಿದ್ದರು.