ಅಧ್ಯಕ್ಷ ಉಪಾಧ್ಯಕ್ಷರು ಅವಿರೋಧ ಆಯ್ಕೆ

ಅಧ್ಯಕ್ಷ ಉಪಾಧ್ಯಕ್ಷರು ಅವಿರೋಧ ಆಯ್ಕೆ

ಗಂಗಾವತಿ : ತಾಲೂಕಿನ ಶ್ರೀರಾಮನಗರ ಗ್ರಾಮ ಪಂಚಾಯಿತಿಗೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ನಡೆಯಿತು ನೂತನ ಅಧ್ಯಕ್ಷರಾಗಿ ರೇಣುಕಮ್ಮ ಜಿಂದಪ್ಪ, ಉಪಾಧ್ಯಕ್ಷರಾಗಿ ರೆಡ್ಡಿ ವೀರ ರಾಜು ಇವರು ಅವಿರೋಧವಾಗಿ ಆಯ್ಕೆಯಾಗುವ ಮೂಲಕ ವಿಜಯಶಾಲಿಗಳಾಗಿದ್ದಾರೆ ಎಂದು ಚುನಾವಣೆ ಅಧಿಕಾರಿ ಮಲ್ಲಪ್ಪ ತಿಳಿಸಿದ್ದಾರೆ.

ಒಟ್ಟು 24 ಸದಸ್ಯರು ಇರುವ ಈ ಪಂಚಾಯಿತಿಯಲ್ಲಿ ಕಾಂಗ್ರೆಸ್ ಕೈವಶವಾಗಿದೆ. ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ರೆಡ್ಡಿ ವೀರರಾಜು ಸತತ 10ನೇ ಬಾರಿಗೆ ಗೆಲುವು ಸಾಧಿಸಿ ಈ ಬಾರಿ ಪಂಚಾಯಿತಿಗೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ನಂತರ ಮಾತನಾಡಿದ ಉಪಾಧ್ಯಕ್ಷ, ಗ್ರಾಮ ಪಂಚಾಯಿತಿಯ ಸರ್ವ ಸದಸ್ಯರು ಒಂದು ಕುಟುಂಬವಿದ್ದಂತೆ ಎಲ್ಲರೂ ಜೊತೆಗೂಡಿ ಊರಿನ ಅಭಿವೃದ್ಧಿ ಮಾಡಲು ಮುಂದಾಗುತ್ತೇವೆ ಹಾಗೂ ಪಂಚಾಯ್ತಿ ವ್ಯಾಪ್ತಿಯಲ್ಲಿ ಹಲವಾರು ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ, ಗ್ರಾಮಾಭಿವೃದ್ಧಿಗೆ ಸಹಕರಿಸುತ್ತೇನೆ ಎಂಬ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಕನಕಗಿರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರೆಡ್ಡಿ ಶ್ರೀನಿವಾಸ, ತಾಲೂಕು ಪಂಚಾಯಿತಿ ಅಧ್ಯಕ್ಷ ಮೊಮ್ಮದ್ ರಫಿ, ಕಾಂಗ್ರೆಸ್ ಹಿರಿಯ ಮುಖಂಡರಾದ ಸಿ.ಪ್ರಭಾಕರ ರಾವ್, ವೆಂಕಟ ಕೃಷ್ಣ, ಭಾಸ್ಕರ್ ರೆಡ್ಡಿ, ಮನ್ನಿ ಕೃಷ್ಣ ಮೂರ್ತಿ, ವೆಂಕಟ ರಾಜು, ಸೇರಿದಂತೆ ಅಪಾರ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Related