ಶಿಕಾರಿಪುರ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧೆ

  • In State
  • July 22, 2022
  • 283 Views
ಶಿಕಾರಿಪುರ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧೆ

ಬೆಂಗಳೂರು ಜು22: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ತಮ್ಮ ಪುತ್ರ ಬಿ.ವೈ ವಿಜಯೇಂದ್ರರವರು ಸ್ಪರ್ಧಿಸಲಿದ್ದು, ಅವರನ್ನು ನನಗಿಂತಲೂ ದೊಡ್ಡ ಅಂತರದಲ್ಲಿ ಗೆಲ್ಲಿಸಿಕೊಡಬೇಕೆಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ನನ್ನಿಂದ ತೆರವಾದ ಸ್ಥಾನಕ್ಕೆ ತನ್ನ ಮಗ ವಿಜಯೇಂದ್ರ ಸ್ಪರ್ಧಿಸುತ್ತಿದ್ದು, ಅವರನ್ನು ಗೆಲ್ಲಿಸಿ ಎಂದಿದ್ದಾರೆ.

ಹಳೆ ಮೈಸೂರು ಪ್ರಾಂತ್ಯದಲ್ಲಿ ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂಬ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಬಹಳ ಒತ್ತಾಯ ಇದೆ ನಿಜ. ಆದರೆ ನಾನು ಕ್ಷೇತ್ರ ಖಾಲಿ ಮಾಡುತ್ತಿರುವುದರಿಂದ, ನಾನು ನಿಲ್ಲದೇ ಇರುವುದರಿಂದ ವಿಜಯೇಂದ್ರ ಶಿಕಾರಿಪುರ ತಾಲ್ಲೂಕಿನಿಂದಲೇ ಸ್ಪರ್ಧಿಸುತ್ತಾರೆ” ಎಂದಿದ್ದಾರೆ.

ಇತ್ತೀಚಿಗೆ ವಿಧಾನಸಭೆಯಿಂದ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ವಿಜಯೇಂದ್ರರಿಗೆ ಬಿಜೆಪಿ ಟಿಕೆಟ್ ನಿರಾಕರಿಸಲಾಗಿತ್ತು. ಆಗ ಯಡಿಯೂರಪ್ಪ ಬಿಜೆಪಿ ವಿರುದ್ಧ ಮುನಿಸಿಕೊಂಡಿದ್ದಾರೆ ಎನ್ನಲಾಗುತ್ತಿತ್ತು. ಈಗ ಅವರು ತಮ್ಮ ಸ್ಥಾನಕ್ಕೆ ತಮ್ಮ ಮಗನೇ ಉತ್ತರಾಧಿಕಾರಿ ಎಂದುಘೋಷಿಸಿದ್ದಾರೆ.

 

Related