ಬೊಮ್ಮಾಯಿ ಸೋಲಿಸಲು ವಿಜಯೇಂದ್ರ ಹಣ ಕಳುಹಿಸಿದ್ದ : ಯತ್ನಾಳ್

ಬೊಮ್ಮಾಯಿ ಸೋಲಿಸಲು ವಿಜಯೇಂದ್ರ ಹಣ ಕಳುಹಿಸಿದ್ದ : ಯತ್ನಾಳ್

ಬೆಳಗಾವಿ: ಕರ್ನಾಟಕ ರಾಜ್ಯದಲ್ಲಿ 2023 ನೇ ಸಾಲಿನ ವಿಧಾನಸಭಾ ಚುನಾವಣೆಯಲ್ಲಿ ಬಸವರಾಜ್ ಬೊಮ್ಮಾಯಿ ಅವರು ಸೋಲಬೇಕೆಂದು ರಾಜ್ಯಾಧ್ಯಕ್ಷ ಸ್ಥಾನದಲ್ಲಿರುವ ಬಿ ವೈ ವಿಜಯೇಂದ್ರ ಅವರು, ಬೊಮ್ಮಾಯಿಯವರು ಚುನಾವಣೆಯಲ್ಲಿ ಈ ಬಾರಿ ಗೆಲ್ಲಬಾರದೆಂದು ಹಣ ಕಳಿಸಿದ್ದರು ಎಂದು ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.

ಕೇವಲ ಬಸವರಾಜ್ ಬೊಮ್ಮಾಯಿ ಮಾತ್ರವಲ್ಲದೆ, ಮಾಜಿ ಸಚಿವ ವಿ.ಸೋಮಣ್ಣ ಸೇರಿದಂತೆ ಹಲವು ನಾಯಕರನ್ನು ಸೋಲಿಸಲು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಆರೋಪಿಸಿದ್ದಾರೆ. ಸೋಮವಾರ ರಾತ್ರಿ ಬೆಳಗಾವಿಯ ಮಾತನಾಡಿದ ಅವರು, ಬಿವೈ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು.

ಯಡಿಯೂರಪ್ಪ ಹೈಕಮಾಂಡ್​​ನವರನ್ನು ಬ್ಲ್ಯಾಕ್ ಮೆಲ್ ಮಾಡಿ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಹೈಕಮಾಂಡ್ ಕೂಡ ಯಾಕೆ ಹೆದರಿತೋ ಗೊತ್ತಿಲ್ಲ. ಸುಮ್ಮನೆ ಶಿಸ್ತು, ಶಿಸ್ತು ಎಂದು ಹೇಳುತ್ತಾರೆ, ನಾವೇನು ಗುಲಾಮರಾ? ನಮ್ಮದೇನು ಶಕ್ತಿ ಇಲ್ಲವೇ, ನಮ್ಮ ಹಿಂದೆಯೂ ಜನ ಇದ್ದಾರೆ. ನೀವೆಲ್ಲ ಗಟ್ಟಿಯಾಗಿ ನಿಲ್ಲಿ, ಎಲ್ಲರನ್ನೂ ಸರಿ ಮಾಡೊಣ ಎಂದು ಯತ್ನಾಳ್ ಹೇಳಿದ್ದಾರೆ.

ಸಚಿವ ಸೋಮಣ್ಣ ಅವರನ್ನು ಸೋಲಿಸಿದ್ದು ಯಾರು? ಲಿಂಗಾಯತರನ್ನು ಅಲ್ಲಿಗೆ ಕಳುಹಿಸಿ ಸೋಮಣ್ಣ ಅವರನ್ನು ಬಲಿ ಕೊಟ್ಟರು. ಸೋಮಣ್ಣ ಅವರನ್ನು ಗೋವಿಂದರಾಜ ನಗರದಲ್ಲಿ 20-25 ಸಾವಿರ ಮತಗಳಿಂದ ಗೆಲ್ಲಿಬೇಕಿತ್ತು. ಆದರೆ ಅವರನ್ನು ಬಲಿಪಶು ಮಾಡಿದರು ಎಂದು ಅವರು ದೂರಿದ್ದಾರೆ.

 

Related