ವಿಜಯೇಂದ್ರ ಶಾಸ್ತ್ರ ಹೇಳ್ತಾರೆ: ಸಿಎಂ

ವಿಜಯೇಂದ್ರ ಶಾಸ್ತ್ರ ಹೇಳ್ತಾರೆ: ಸಿಎಂ

ಬೆಂಗಳೂರು: ಚುನಾವಣೆಯ ನಂತರ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳು ನಿಲ್ಲಿಸಲಾಗುತ್ತದೆ ಎಂದು ವಿಜಯೇಂದ್ರ ಅವರು ಹೇಳಿದ್ದರು. ಇನ್ನು ಇದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಶಾಸ್ತ್ರ ಹೇಳುದು ಕಲಿತಿದ್ದಾರೆ ಎಂದು ಟಾಂಗ್ ನೀಡಿದ್ದಾರೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪರ ಪ್ರಚಾರ ಮಾಡಲು ತೆರಳುವ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ಲೋಕಸಭಾ ಚುನಾವಣೆಯ ಬಳಿಕ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಂತು ಹೋಗಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿರುವುದಕ್ಕೆ ಉತ್ತರಿಸಿದ ಅವರು, ಅವರೇನು ಜ್ಯೋತಿಷಿಯಾ? ಎಂದು ಕೇಳಿದರು.

ಈಗಿನ ಅವಧಿಯ ನಂತರ ಮುಂದಿನ ಅವಧಿಗೂ ತಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಮತ್ತು ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಮುಂದಿನ ಹಣಕಾಸು ವರ್ಷದಲ್ಲಿ ಯೋಜನೆಗಳಿಗೆ ₹ 52,000 ಕೋಟಿ ವಿನಿಯೋಗಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

Related