ವಿನಯ್ ಕುಲಕರ್ಣಿಗೆ 14 ದಿನ ನ್ಯಾಂಯಾಂಗ ಬಂಧನ

ವಿನಯ್ ಕುಲಕರ್ಣಿಗೆ 14 ದಿನ ನ್ಯಾಂಯಾಂಗ ಬಂಧನ

ಧಾರವಾಡ :   ಜಿ.ಪಂ  ಸದಸ್ಯ  ಯೋಗೀಶ್  ಗೌಡ  ಹತ್ಯೆ  ಪರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಹದಿನಾಲ್ಕು ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.

ವಿನಯ್ ಕುಲಕರ್ಣಿಯವರ ಮೂರು ದಿನಗಳ ಸಿಬಿಐ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ಗೆ ಹಾಜರು ಪಡಿಸಲಾಗಿತ್ತು.

ಈ ವೇಳೆ ಸಿಬಿಐ ಮಾಜಿ ಸಚಿವ ಹೆಚ್ಚಿನ ವಿಚಾರಣೆಗಾಗಿ ಮತ್ತೆ ಮೂರು ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಕೇಳಿತ್ತು. ಆದರೆ ಕೋರ್ಟ್ ಹದಿನಾಲ್ಕು ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

Related