ಮೈಸೂರು : ಬಿ.ಎಸ್. ಯಡಿಯೂರಪ್ಪ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಎಂಎಲ್ಸಿ ಹೆಚ್. ವಿಶ್ವನಾಥ್, ಯಡಿಯೂರಪ್ಪನವರಿಗೆ ದೇವರು ಒಳ್ಳೆಯದು ಮಾಡಲ್ಲ ಎಂದು ಹೇಳಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್. ವಿಶ್ವನಾಥ್, ಸಿಎಂ ಯಡಿಯೂರಪ್ಪ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ. ನಮ್ಮ 17 ಜನರ ತ್ಯಾಗವನ್ನು ಯಡಿಯೂರಪ್ಪ ಮರೆತಿದ್ದಾರೆ. ಅವರಿಗೆ ಯಡಿಯೂರು ಸಿದ್ದಲಿಂಗೇಶ್ವರ ಕೂಡ ಒಳ್ಳೆಯದನ್ನು ಮಾಡಲ್ಲ ಎಂದು ಶಪಿಸಿದ್ದಾರೆ.
ಸರ್ಕಾರ ರಚನೆಯಲ್ಲಿ ಅವರ ಪಾತ್ರವೇನೆಂದು ಅವರಿಗೆ ಮಂತ್ರಿ ಸ್ಥಾನ ನೀಡುತ್ತಿದ್ದಾರೆ? ಯೋಗೀಶ್ವರ್ ಬ್ಲಾಕ್ಮೇಲ್ ಗೇನಾದರೂ ಸಿಕ್ಕಿ ಹಾಕಿಕೊಂಡಿದ್ದೀರಾ ಎಂದು ಪ್ರಶ್ನಿಸಿದ್ದಾರೆ.
ಅಬಕಾರಿ ಸಚಿವರಾಗಿದ್ದ ಹೆಚ್. ನಾಗೇಶ್ ಅವರನ್ನು ಯಾಕೆ ಸಂಪುಟದಿಂದ ಕೈ ಬಿಡುತ್ತೀದ್ದೀರಿ? ನಾಗೇಶ್ ಏನು ತಪ್ಪು ಮಾಡಿದ್ದಾರೆ? ಪ್ರಾಮಾಣಿಕವಾಗಿ ಅವರ ಖಾತೆ ನಿಭಾಯಿಸಿಕೊಂಡು ಹೋಗುತ್ತಿದ್ದಾರೆ ಅಂತvರಿಗೆ ಅನ್ಯಾಯ ಮಾಡುತ್ತಿರುವುದೇಕೆ? ಸಿಎಂ ಯಡಿಯೂರಪ್ಪ ನಾಲಿಗೆ ಮತ್ತು ಮಾತು ಕಳೆದುಕೊಂಡಿದ್ದಾರೆ ಎಂದು ವಿಶ್ವನಾಥ್ ಗುಡುಗಿದ್ದಾರೆ.