ಕಾಲೇಜಿಗೆ ಭೇಟಿ ನೀಡಿದ : ಬೊಮ್ಮಾಯಿ

ಕಾಲೇಜಿಗೆ ಭೇಟಿ ನೀಡಿದ : ಬೊಮ್ಮಾಯಿ

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಭೌತಿಕ ತರಗತಿ ಆರಂಭದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಬೆಂಗಳೂರಿನ ಮಲ್ಲೇಶ್ವರಂ ಬಡಾವಣೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿದರು.

 

ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಕೈಗೊಳ್ಳಲಾಗಿರುವ ಸಿದ್ಧತೆಗಳನ್ನು ಪರಿಶೀಲಿಸಿದರು. ಯಾವುದೇ ಆತಂಕ ಇಲ್ಲದೆ ಕಾಲೇಜಿಗೆ ಬನ್ನಿ ಎಂದು ಅವರು ವಿದ್ಯಾರ್ಥಿಗಳಿಗೆ ಆಹ್ವಾನಿಸಿದರು.

ಕಾಲೇಜು ಆವರಣದಲ್ಲಿ ಸಿಎಂ ಸಸಿ ನೆಟ್ಟು ನೀರು ಹಾಕಿದರು.

ಬಳಿಕ ಡಾ. ಅಶ್ವಥ್ ನಾರಾಯಣ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಬಿಸಿ ನಾಗೇಶ್, ಉನ್ನತ ಶಿಕ್ಷಣ ಸಚಿವ ಅಶ್ವಥನಾರಾಯಣ ಉಪಸ್ಥಿತರಿದ್ದರು.

Related