ಬಿ.ನಾಗೇಂದ್ರ ಸ್ವ-ಇಚ್ಚೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ..!

ಬಿ.ನಾಗೇಂದ್ರ ಸ್ವ-ಇಚ್ಚೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ..!

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ ನಾಗೇಂದ್ರ ಅವರು ಇಂದು ತಮ್ಮ ಸ್ವ ಇಚ್ಛೆಯಿಂದ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಯಾರೂ ನನ್ನ ಮೇಲೆ ಒತ್ತಡ ಹಾಕಿಲ್ಲ. ಯಾರಿಗೂ ಮುಜುಗರ ಆಗಬಾರದೆಂದು ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಲು ನಿರ್ಧಾರ ತೆಗೆದುಕೊಂಡಿದ್ದೇನೆ. ಸಚಿವ ಸ್ಥಾನ ರಾಜೀನಾಮೆ ಕುರಿತು ಇನ್ನೂ ಮುಖ್ಯಮಂತ್ರಿಗೆ ಹೇಳಿಲ್ಲ. ರಾತ್ರಿ 7-30ಕ್ಕೆ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ ಎಂದರು. ಇದನ್ನೂ ಓದಿ: ಸಚಿವರ ಜೊತೆಗೆ ಮುಖ್ಯಮಂತ್ರಿ ರಾಜೀನಾಮೆ ನೀಡಲಿ: ಆರ್‌. ಅಶೋಕ್

ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತದ ಅವ್ಯವಹಾರ ಆರೋಪ ಕುರಿತು ಎಸ್ ಐಟಿ ತನಿಖೆ ನಡೆಯುತ್ತಿದೆ. ತಮ್ಮ ವಿರುದ್ಧದ ಎಲ್ಲಾ ಆರೋಪಗಳು ನಿರಾಧಾರ ಎಂದ ಸಚಿವರು, ಆರೋಪಗಳಿಂದ ಮುಕ್ತನಾಗಿ ಬಂದ ಮೇಲೆ ಮಾತನಾಡುವುದಾಗಿ ತಿಳಿಸಿದರು.

Related