ಕ್ಷೇತ್ರ ತ್ಯಾಗ ಮಾಡಿದ್ದೇ ತಪ್ಪಾಯ್ತು, ದಳಪತಿಗೆ ಸುಮಲತಾ ಟಾಂಗ್..!

ಕ್ಷೇತ್ರ ತ್ಯಾಗ ಮಾಡಿದ್ದೇ ತಪ್ಪಾಯ್ತು, ದಳಪತಿಗೆ ಸುಮಲತಾ ಟಾಂಗ್..!

ಮಂಡ್ಯ: ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಹುಮತಗಳ ಅಂತರದಿಂದ ಜಯ ಸಾಧಿಸಿದ ಸುಮಲತಾ ಅಂಬರೀಶ್ ಅವರಿಗೆ ಈ ಬಾರಿ ಟಿಕೆಟ್ ನಿಗದಿದ್ದ ಕಾರಣ ತಮ್ಮ ಕ್ಷೇತ್ರ ತ್ಯಾಗ ಮಾಡಿದ್ದಾರೆ.

ಈ ಬಾರಿ ಬಿಜೆಪಿ ಪಕ್ಷದಲ್ಲಿ ಸಂಸದ ಸಮಾನತ ಅವರಿಗೆ ಟಿಕೆಟ್ ನೀಡದಿದ್ದ ಕಾರಣ ನಾನು ಕ್ಷೇತ್ರ ತ್ಯಾಗ ಮಾಡಿದ್ದೇನೆ. ಆದರೆ ಕ್ಷೇತ್ರ ತ್ಯಾಗ ಮಾಡಿದ್ದೆ ನನ್ನ ತಪ್ಪಾಯ್ತಾ ಎಂದು ದಳಪತಿಗೆ ಟಾಂಗ್ ಕೊಟ್ಟಿದ್ದಾರೆ. ಮೋದಿ ಅವರು ಪ್ರಧಾನಿಯಾಗಬೇಕು ಎಂಬ ಉದ್ದೇಶದಿಂದ ನಾನು ಗೆದ್ದಂತಹ ಕ್ಷೇತ್ರ ತ್ಯಾಗ ಮಾಡಿದ್ದೀನಿ. ಈ ಹಂತದಲ್ಲಿ ಅಂಬರೀಶ್ ಅವರ ಪಡೆಯ ಶಕ್ತಿಯನ್ನು ಎನ್​​ಡಿಎಗೆ ಕೊಟ್ಟಿದ್ದೇವೆ. ನಾವು ನಿಷ್ಠೆಯಿಂದ ಕೆಲಸ ಮಾಡಿದ್ದೇವೆ ಎಂದು ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ.

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದೊಡ್ಡರಸಿನಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತಗಟ್ಟೆಯಲ್ಲಿ ಮತದಾನ ಮಾಡಿದ ನಂತರ ಮಾತನಾಡಿದ ಅವರು, ಸುಮಲತಾ ಅಂಬರೀಶ್, ಚುನಾವಣೆಯಲ್ಲಿ ಸಹಕರಿಸಿಲ್ಲ ಎಂಬ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ದೇವೆಗೌಡರು ದೊಡ್ಡವರು, ಅವರಿಗೆ ಸರಿಯಾದ ಮಾಹಿತಿ ಕೊಡದೆ ಆ ರೀತಿ ಹೇಳಿದ್ದಾರೆ. ಅವರಿಂದ ಅಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ ಎಂದು ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದರು.

ಈ‌ ದಿನದವರೆಗೂ ಜೆಡಿಎಸ್​ನ ಯಾವ ನಾಯಕರು ಯಾವುದೇ ಸಭೆಗೆ ಆಹ್ವಾನಿಸಿಲ್ಲ. ಅವರು ಕರೆದು ನಾನು ಬರದೇ ಇದ್ದರೆ ತಪ್ಪಾಗುತ್ತದೆ. ಆದರೆ ಅವರು ನನ್ನ‌ ಕರೆದಿಲ್ಲ, ನಾನಿಲ್ಲದೇ ಅವರು ಚುನಾವಣೆ ಮಾಡಿಕೊಳ್ಳುತ್ತೀವಿ ಎಂಬ ಭಾವನೆ ಇರಬಹುದು ಎಂದು ದಳಪತಿಗಳಿಗೆ ಸುಮಲತಾ ಅಂಬರೀಶ್ ಟಾಂಗ್ ಕೊಟ್ಟರು.

 

Related