ಬೆಂಗಳೂರು: ಕರ್ನಾಟಕ ರಾಜ್ಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದರಿಂದ ರಾಜ್ಯದಲ್ಲಿ ರೈತರಿಗೂ ಸೇರಿ ನಮ್ಮೆಲ್ಲರಿಗೂ ಅನ್ಯಾಯವಾಗುತ್ತಿದೆ ಎಂದು ವಾಟಾಳ್ ನಾಗರಾಜ್ ಅವರು ಪ್ರತಿಭಟನೆಯನ್ನು ಮಾಡಿದ್ದಾರೆ. ಇಂದು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕಪ್ಪು ಬಾವುಟ ಹಿಡಿದು ಪ್ರತಿಭಟನೆ ಮಾಡಿದರು.
ಹೌದು, ಕಾವೇರಿ ವಿಚಾರವಾಗಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಕ್ಕೆ ಒತ್ತಾಯಿಸಿ ಕನ್ನಡ ಒಕ್ಕೂಟದಿಂದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಮೈಸೂರ್ ಬ್ಯಾಂಕ್ ವೃತ್ತದಲ್ಲಿ ಕಪ್ಪು ಭಾವುಟ ಪ್ರದರ್ಶನ ಮಾಡಿ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಬಾರದಂತೆ ಒತ್ತಾಯಿಸಿದರು.
ತಮಿಳುನಾಡಿನಲ್ಲಿ ಜಲಾಶಯಗಳು ತುಂಬಿದ್ದರು ಕೂಡ ನಮ್ಮಲ್ಲಿ ನೀರು ಬಿಡುತ್ತಾ ಇದ್ದಾರೆ. ಕರ್ನಾಟಕದಲ್ಲಿ ಜಲಾಶಯಗಳಾದ ಕೃಷ್ಣಸಾಗರ, ಹೇಮಾವತಿ, ತುಂಗಭದ್ರಾ, ಕೆ ಆರ್ ಎಸ್ ಯಾವುದೇ ಜಲಾಶಯದಲ್ಲೂ ನೀರಿಲ್ಲ.