ಗುಂಪು ರಾಜಕಾರಣ ನಮ್ಮಲ್ಲಿ ಇಲ್ಲ: ಡಿಸಿಎಂ

ಗುಂಪು ರಾಜಕಾರಣ ನಮ್ಮಲ್ಲಿ ಇಲ್ಲ: ಡಿಸಿಎಂ

ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕೋಲಾರ ಲೋಕಸಭಾ ಕ್ಷೇತ್ರವು ಬಾರಿ ಕುತೂಹಲ ಕೆರಳಿಸಿದ್ದು, ಕಾಂಗ್ರೆಸ್ ಪಕ್ಷ ಈ ಬಾರಿ ಕೆ ವಿ ಗೌತಮ್ ಅವರಿಗೆ ಟಿಕೆಟ್ ನೀಡಿ ಉಭಯ ಬಣಗಳ ನಾಯಕರಗಳಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸ್ಪಷ್ಟ ಎಚ್ಚರಿಕೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಚಿವ ಕೆ.ಎಚ್‌ ಮುನಿಯಪ್ಪ ಹಾಗೂ ರಮೇಶ್ ಕುಮಾರ್ ಜೊತೆ ಮಾತನ್ನಾಡಿದ್ದೇನೆ. ಅವರವರ ಅಭಿಪ್ರಾಯಯನ್ನ ಹೇಳಿದ್ದಾರೆ. ಎರಡೂ ಬಣಗಳಿಗೂ ಟಿಕೆಟ್ ಕೊಟ್ಟಿಲ್ಲ. ಗುಂಪು ರಾಜಕಾರಣ ನಮ್ಮಲ್ಲಿ ಇಲ್ಲ. ಯಾರೇ ಆದರೂ ಲಕ್ಷ್ಮಣ ರೇಖೆ ದಾಟಲು ಸಾಧ್ಯವಿಲ್ಲ ಎಂದರು.

 

Related