ನಮ್ಮಲ್ಲಿ ಒಳಜಗಳ ಇಲ್ಲ: ಸಿದ್ದರಾಮಯ್ಯ

ನಮ್ಮಲ್ಲಿ ಒಳಜಗಳ ಇಲ್ಲ: ಸಿದ್ದರಾಮಯ್ಯ

ಮೈಸೂರು: ವಿರೋಧ ಪಕ್ಷದವರು ನಮ್ಮ ಮೇಲೆ ಇಲ್ಲದ ಸಲದ ಆರೋಪ ಮಾಡುವುದರ ಜೊತೆಗೆ ನಮ್ಮ ನಮ್ಮಲ್ಲಿಯೇ ಜಗಳ ಇದೆ ಎಂದು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ. ಆದರೆ ನಮ್ಮಲ್ಲಿ ಯಾವುದೇ ರೀತಿ ಜಗಳವಿಲ್ಲ. ನಾವೆಲ್ಲರೂ ಒಗ್ಗಟ್ಟಿನಿಂದ ಇದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ನಮ್ಮಲ್ಲಿ ಒಳಜಗಳ ಇಲ್ಲ. ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ ಎಂದು  ಪಬಿಜೆಪಿ ನಾಯಕರು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ರಾಜಕೀಯವಾಗಿ ಹೇಳಿಕೆ ನೀಡುತ್ತಿದ್ದಾರೆ  ಎಂದರು.

ಇದ್ದನ್ನೂ ಓದಿ: ದೇಶದಲ್ಲಿ ಇಂಡಿಯಾ ಒಕ್ಕೂಟದ ಸರ್ಕಾರ ರಚನೆ ಆಗಲಿದೆ: ಡಿಸಿಎಂ

ಪರಿಷತ್ ಚುನಾವಣೆಯ ವಾತಾವರಣ ಉತ್ತಮವಾಗಿದ್ದು, ಈ ಬಾರಿ ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಅದಕ್ಕಾಗಿ ಅಭ್ಯರ್ಥಿಗಳನ್ನು ಆರು ತಿಂಗಳು ಮುಂಚಿತವಾಗಿಯೇ ಆಯ್ಕೆ ಮಾಡಲಾಗಿತ್ತು. ಅಭ್ಯರ್ಥಿಗಳಿಗೆ ಸಮಯ ಸಿಕ್ಕು, ಮತದಾರರನ್ನು ಭೇಟಿಯಾಗಲು ಅವಕಾಶ ದೊರೆಯಿತು ಎಂದರು.

ಮೈತ್ರಿ ಪರಿಣಾಮ ಚುನಾವಣೆಯ ಮೇಲೆ ಆಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಲೋಕಸಭೆ ಚುನಾವಣೆಯಲ್ಲಿಯೂ ಕೆಡಿಎಎ ಬಿಜೆಪಿ  ಮೈತ್ರಿ  ಮಾಡಿಕೊಂಡಿದ್ದು, ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆಗೆ ಉತ್ತರ ನೀಡಿ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರು ರಾಜಕೀಯವಾಗಿ ಪ್ರಬುದ್ಧರಾಗಿರುವವರುಯಾವುದು ಸರಿ, ತಪ್ಪು ಎನ್ನುವ ಬಗ್ಗೆ ಅರಿವು ಹೊಂದಿದವರು. ಕೇಂದ್ರ ಸರ್ಕಾರದ ಸಾಧನೆಗಳು ಹಾಗೂ ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ತುಲನೆ ಮಾಡುವ ಶಕ್ತಿ ಅವರಿಗಿದೆ ಎಂದರು.

 

Related