ಈಶ್ವರಪ್ಪ ಅವರು ನಮ್ಮ ಪಕ್ಷದಲ್ಲೇ ಇರಬೇಕೆಂಬುದು ನಮ್ಮ ಆಸೆ: ವಿಜಯೇಂದ್ರ

ಈಶ್ವರಪ್ಪ ಅವರು ನಮ್ಮ ಪಕ್ಷದಲ್ಲೇ ಇರಬೇಕೆಂಬುದು ನಮ್ಮ ಆಸೆ: ವಿಜಯೇಂದ್ರ

ಶಿವಮೊಗ್ಗ: ರಾಜ್ಯ ಬಿಜೆಪಿಯಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರಿಗೆ ಟಿಕೆಟ್ ನೀಡದಿದ್ದ ಕಾರಣ ಈಗ ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಖುದ್ದು ಈಶ್ವರಪ್ಪ ಅವರೆ ಹೇಳಿದ್ದಾರೆ.

ಆದರೆ ಈಶ್ವರಪ್ಪ ಅವರನ್ನು ಮತ್ತೆ ಪಕ್ಷಕ್ಕೆ ಕರೆಯಲು ಬಿಜೆಪಿ ಪಕ್ಷ ಹರ ಸಾಹಸ ಪಡುತ್ತಿದ್ದರು ಕೂಡ ಯಾವುದೇ ಕಾರಣಕ್ಕೂ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದನ್ನು ನಿಲ್ಲಿಸುವುದಿಲ್ಲವೆಂದು ಹೇಳಿದ್ದಾರೆ.

ಕೆ ಎಸ್ ಈಶ್ವರಪ್ಪ ಅವರಿಗೆ ನಮ್ಮ ಪಕ್ಷದಲ್ಲಿ ಇನ್ನೂ ಕೂಡ ಅವಕಾಶ ಇದೆ ಹಾಗಾಗಿ ನಮ್ಮ ಪಕ್ಷಕ್ಕೆ ಬಂದು ನಮ್ಮ ಪಕ್ಷವನ್ನು ಬೆಂಬಲಿಸಿ ಎಂದು ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರಿಗೆ ಇನ್ನೂ ಕಾಲ ಮಿಂಚಿಲ್ಲ.  ಅವರು ನಮ್ಮ ಜೊತೆ ಇರಬೇಕು ಎಂಬುದು ನಮ್ಮ ಆಸೆ ಕೂಡ ಆಗಿರುವುದರಿಂದ ಅವರು ನಮ್ಮ ಪಕ್ಷಕ್ಕೆ ಮತ್ತೆ ಬರಬಹುದು ಎಂದು ಹೇಳಿದ್ದಾರೆ.

ಈಶ್ವರಪ್ಪ ಹಿರಿಯರು, ಪಕ್ಷ ಕಟ್ಟಲು ನಿಮ್ದು‌ದೊಡ್ಡ ಪಾಲಿದೆ. ಯಾವುದೋ ಪರಿಸ್ಥಿತಿ ಸಂದರ್ಭ ಈ ಸನ್ನಿವೇಶಕ್ಕೆ ತಮ್ಮನ್ನು ದೂಡಿದೆ. ಮೋದಿ ಪ್ರಧಾನಮಂತ್ರಿ ಆಗಲು ಪಕ್ಷದ ಹಿತದೃಷ್ಟಿಯಿಂದ ತಾವು ಕೈಜೋಡಿಸಬೇಕು. ನಿಮ್ಮ ಸಮಸ್ಯೆ ಇದ್ದರೆ ದೆಹಲಿ ನಾಯಕರ ಜೊತೆ ಮಾತನಾಡುತ್ತೇವೆ. ನಾವಂತು ನಿಮ್ಮ ಜೊತೆ‌ ಇರುತ್ತೇವೆ ಎಂದು ಭರವಸೆ ನೀಡಿದರು.

 

Related