ಬೆಂಗಳೂರು: ರಾಜ್ಯದಲ್ಲಿ ಸರಿಯಾಗಿ ಮಳೆ ಆಗದಿದ್ದ ಕಾರಣ ವಿದ್ಯುತ್ ಉತ್ಪಾದನೆಗೆ ತೊಂದರೆ ಆಗುತ್ತಿರುವುದರಿಂದ ನಾವು ಕೊಂಚ ವಿದ್ಯುತ್ ಸಮಸ್ಯೆಯನ್ನು ಅನುಭವಿಸಬೇಕಾಗುತ್ತದೆ.
ಆದರೆ ರೈತರ ಬಂಸೆಟಿಗಳಿಗೆ ಪ್ರತಿನಿತ್ಯ ಐದು ಗಂಟೆಗಳ ಕಾಲ ವಿದ್ಯುತ್ ನೀಡಬೇಕೆಂದು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 2000 ಮೆಗಾ ವ್ಯಾಟ್ ವಿದ್ಯುತ್ ಕೊರತೆ ಇದೆ. ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳುತ್ತೇವೆ. ಬಿಜೆಪಿ ಸರ್ಕಾರದಲ್ಲಿ ಹಾಗೂ ಕುಮಾರಸ್ವಾಮಿ ಸರ್ಕಾರದಲ್ಲಿ ವಿದ್ಯುತ್ ಉತ್ಪಾದನೆ ನಡೆಯಲಿಲ್ಲ.
ಹೀಗಾಗಿ ವಿದ್ಯುತ್ ಸಮಸ್ಯೆ ಎದುರಾಗಿದೆ. ಹೊರಗಡೆ ವಿದ್ಯುತ್ ಖರೀದಿ ಮಾಡಲು ಕೂಡ ನಾನು ಸೂಚನೆ ಕೊಟ್ಟಿದ್ದೇನೆ. ಸಕ್ಕರೆ ಕಾರ್ಖಾನೆಯಿಂದ ವಿದ್ಯುತ್ ಉತ್ಪಾದನೆ ಹೆಚ್ಚು ಮಾಡಲು ಸೂಚನೆ ನೀಡಿದ್ದೇವೆ. ಆದಷ್ಟು ರೈತರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡುತ್ತೇವೆ ಎಂದರು.