ಲೋಕಸಭಾ ಚುನಾವಣೆ ಸ್ಪರ್ಧೆಯ ಬಗ್ಗೆ ನಟಿ ಮಾಧುರಿ ದೀಕ್ಷಿತ್ ಹೇಳಿದ್ದೇನು?

ಲೋಕಸಭಾ ಚುನಾವಣೆ ಸ್ಪರ್ಧೆಯ ಬಗ್ಗೆ ನಟಿ ಮಾಧುರಿ ದೀಕ್ಷಿತ್ ಹೇಳಿದ್ದೇನು?

ಮುಬೈ: ಲೋಕಸಭಾ ಚುನಾವಣೆಯು ಇನ್ನೇನು ಕೆಲವೇ ತಿಂಗಳಗಳು ಬಾಕಿ ಇದ್ದು, ಎಲ್ಲಾ ಪಕ್ಷಗಳು ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.

ಬಾಲಿವುಡ್ ನ ಬೆಳಗಿ ಹಿರಿಯ ನಟಿ ಮಾಧುರಿ ದೀಕ್ಷಿತ್ ಅವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರ ಎಂಬ ಸುದ್ದಿಗಳು ಈಗಾಗಲೇ ಹರಿದಾಡುತ್ತಿದ್ದು ಮುಂಬೈ ನಗರದಿಂದ ಒಂದು ಕ್ಷೇತ್ರದಲ್ಲಿ ಮಾಧುರಿ ದೀಕ್ಷಿತ್ ಈ ಬಾರಿ ಲೋಕಸಭಾ ಅಖಾಡಕ್ಕೆ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಆದರೆ ನಟಿ ಮಾಧುರಿ ದೀಕ್ಷಿತ್ ಅವರು ಸಂದರ್ಶನ ಒಂದರಲ್ಲಿ ನಾನು ರಾಜಕೀಯ ಎಂಟ್ರಿ ಕೊಡುವ ಮಾತೇ ಇಲ್ಲ ನನಗೆ ಸಿಂಹ ರಂಗವೇ ಪ್ರಪಂಚ ಸಿನಿಮಾದಲ್ಲಿ ನಾನು ಮುಂದುವರೆಯುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಮಾಧುರಿ ದೀಕ್ಷಿತ್​ಗೆ ರಾಜಕೀಯ ಸೇರಲು ಇಷ್ಟ ಇಲ್ಲ. ಅವರು ಸಿನಿಮಾ ರಂಗದಲ್ಲೇ ಮುಂದುವರಿಯಲು ಬಯಸಿದ್ದಾರೆ. ‘ಚುನಾವಣೆ ಸಂದರ್ಭದಲ್ಲಿ ನಾನು ಸ್ಪರ್ಧಿಸುತ್ತೇನೆ ಎನ್ನುವ ಸುದ್ದಿ ಹರಿದಾಡುತ್ತದೆ. ಆದರೆ, ರಾಜಕೀಯ ನನ್ನ ಪ್ಯಾಷನ್ ಅಲ್ಲ. ನನ್ನ ಪಂಚಕ್ ಸಿನಿಮಾ ಯಶಸ್ಸು ಕಂಡರೆ ಮತ್ತೊಂದಷ್ಟು ಸಿನಿಮಾ ಮಾಡಲು ಪ್ರೇರಣೆ ಆಗುತ್ತದೆ’ ಎಂದು ಮಾಧುರಿ ದೀಕ್ಷಿತ್ ಹೇಳಿದ್ದಾರೆ.

 

Related