NIA ವಶಕ್ಕೆ ಪಡೆದಿರುವ ಬಿಜೆಪಿ ಕಾರ್ಯಕರ್ತನ ಬಗ್ಗೆ ಆರಗ ಜ್ಞಾನೇಂದ್ರ ಹೇಳಿದ್ದೇನು?

NIA ವಶಕ್ಕೆ ಪಡೆದಿರುವ ಬಿಜೆಪಿ ಕಾರ್ಯಕರ್ತನ ಬಗ್ಗೆ ಆರಗ ಜ್ಞಾನೇಂದ್ರ ಹೇಳಿದ್ದೇನು?

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿರುವ ರಾಮೇಶ್ವರ ಕೆಫೆ ಬಾಂಬ್ ಸ್ಪೋಟಕ್ಕೆ ರೋಚಕ ತಿರುವೊಂದು ಸಿಕ್ಕಿದ್ದು, ಬಿಜೆಪಿ ಕಾರ್ಯಕರ್ತನನ್ನು ಎನ್ ಐ ಎ ವಶಕ್ಕೆ ಪಡೆದಿರುವ ಬಗ್ಗೆ ಆರ್ಗ ಜ್ಞಾನೇಶ್ ರವರು ಸ್ಪಷ್ಟನೆ ನೀಡಿದ್ದಾರೆ.

ಹೌದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿರುವ ರಾಮೇಶ್ವರ ಕೆಫೆಯಲ್ಲಿ ಕಳೆದ ತಿಂಗಳು ಬಾಂಬ್ ಸ್ಪೋಟದ ಹಿನ್ನೆಲೆಗೆ ಈಗ ರೋಚಕ ತಿರುವ ಸಿಕ್ಕಿದ್ದು ಬಿಜೆಪಿ ಕಾರ್ಯಕರ್ತ ಮತಿನ್ ಎಂಬುವವನನ್ನು ಎನ್ಎಐ ವರ್ಷಕ್ಕೆ ಪಡೆದಿದೆ.

ಇನ್ನು ಇದರ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು, ಮತಿನ್​ ಎಂಬುವನು ಸಿಮ್ ಖರೀದಿಸಿ ಕೊಟ್ಟ ವಿಳಾಸ, ದಾಖಲೆ ದುರುಪಯೋಗ ಮಾಡಿಕೊಂಡಿದ್ದಾನೆ. ಈ ಹಿನ್ನೆಲೆ ತೀರ್ಥಹಳ್ಳಿಯ ಸಾಯಿ ಪ್ರಕಾಶ್​ನನ್ನು ವಿಚಾರಣೆ ಮಾಡಲಾಗಿದ್ದು, ಸತ್ಯಾಂಶ ಗೊತ್ತಾದ ನಂತರ ನಿನ್ನೆ ಎನ್​ಐಎ ತಂಡ ವಾಪಸ್ ಕಳುಹಿಸಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಕೇಸ್​ನಲ್ಲಿ ಬಿಜೆಪಿ ಕಾರ್ಯಕರ್ತರ ಭಾಗಿ ಬಗ್ಗೆ ಅಪಪ್ರಚಾರ ಮಾಡಲಾಗಿದೆ. ತೀರ್ಥಹಳ್ಳಿಯ ಮೊಬೈಲ್ ಅಂಗಡಿಯಲ್ಲಿ ಸಿಮ್ ಖರೀದಿಸಿ 8 ಹಿಂದುಗಳ ಹೆಸರಿನಲ್ಲಿ ಮತಿನ್ ನಕಲಿ ಫೇಸ್​ಬುಕ್ ಅಕೌಂಟ್ ಮಾಡಿದ್ದಾನೆ. ಇವರನ್ನು NIA ತಂಡ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ. ನಾವೆಲ್ಲರೂ ಎಚ್ಚರಿಕೆಯಿಂದ ಇರಬೇಕಿದೆ. ಬಿಜೆಪಿ ಕಾರ್ಯಕರ್ತ ರಾಷ್ಟ್ರವಿರೋಧಿ ಕೃತ್ಯದಲ್ಲಿ ಭಾಗಿ ಆಗಲ್ಲ ಎಂದು ಹೇಳಿದ್ದಾರೆ.

 

Related