ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಇಂದು ದೆಹಲಿಯಲ್ಲಿ ಹೈಕಮಾಂಡ್ ನಾಯಕರುಗಳ ಮುಂದೆ ಮತ್ತು ಕರ್ನಾಟಕ ರಾಜ್ಯದ ಬಿಜೆಪಿ ನಾಯಕರುಗಳು ನೇತೃತ್ವದಲ್ಲಿ ಮತ್ತೆ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ಮರು ಸೇರ್ಪಡೆಯ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, ನಿನ್ನೆ ನಾನು ಕರೆ ಮಾತಾಡಿದಾಗ ನಾನು ಹೋಗಲ್ಲ ಎಂದಿದ್ದರು. ನಾವು ಸೀನಿಯರ್ ಲೀಡರ್ ಎಂದು ಸ್ಥಾನಮಾನ ಕೊಟ್ಟಿದ್ವಿ. ಈಗ ನಾನು ಫ್ಯಾಕ್ಸ್ನಲ್ಲಿ ರಾಜೀನಾಮೆ ಕೊಟ್ತೇನೆ ಅಂದಿದ್ದಾರೆ. ಒತ್ತಡದಲ್ಲಿ ಕರೆದುಕೊಂಡು ಹೋಗಿದ್ದಾರೋ ಏನೋ ಗೊತ್ತಿಲ್ಲ. ಟಿಕೆಟ್ ತಪ್ಪಿಸಿದಾಗ ಶೆಟ್ಟರ್ಗೆ ದೇಶದ ಹಿತ ಗೊತ್ತಿರಲಿಲ್ವಾ? ನಾವು ಅವರನ್ನ ಬಹಳ ಗೌರವದಿಂದ ನಡೆಸಿಕೊಂಡಿದ್ದೇವೆ. ನನಗೆ ಈವರೆಗೂ ರಾಜೀನಾಮೆ ಪತ್ರ ತಲುಪಿಲ್ಲ. ಶೆಟ್ಟರ್ ಅವರು ಮಾತಾಡಲಿ ಬಳಿಕ ಮುಂದಿನ ದಿನಗಳಲ್ಲಿ ನಾನು ಮಾತಾಡ್ತೇನೆ ಎಂದರು.