ಮುಂದಿನ ಪ್ರಧಾನಿ ಯಾರೆಂಬ ಪ್ರಶ್ನೆಗೆ ಕುಮಾರಸ್ವಾಮಿ ಹೇಳಿದ್ದೇನು..?

ಮುಂದಿನ ಪ್ರಧಾನಿ ಯಾರೆಂಬ ಪ್ರಶ್ನೆಗೆ ಕುಮಾರಸ್ವಾಮಿ ಹೇಳಿದ್ದೇನು..?

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ನಂತರ ಇದೀಗ ಲೋಕಸಭಾ ಚುನಾವಣೆಯಲ್ಲಿ ಎರಡು ಪಕ್ಷಗಳ ಗೆಲ್ಲುವ ಮೂಲಕ ಮತ್ತೆ ಮುನ್ನುಗ್ಗುತ್ತಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಜೆಡಿಎಸ್ ಪಕ್ಷದ ಕಥ ಮುಗೀದ ಅಧ್ಯಾಯ ಎನ್ನುತ್ತಿರುವ ಜನತೆಗೆ ಇದೀಗ ಕುಮಾರಸ್ವಾಮಿಯವರು ಉತ್ತರ ನೀಡಿದ್ದಾರೆ.

ಹೌದು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇದೀಗ ಗೆಲುವಿನ ನಗೆಯ ಬೀರಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗೆದ್ದಿರುವ ಕುಮಾರಸ್ವಾಮಿಯವರಿಗೆ ಇದೀಗ ಎನ್ ಡಿಎ ನಾಯಕರುಗಳು ಕುಮಾರಸ್ವಾಮಿಯನ್ನು ಬುಲಾವ್ ಮಾಡಿರುವುದರಿಂದ ಅವಸರದಲ್ಲಿ ಕುಮಾರಸ್ವಾಮಿಯವರು ಇಂದು ಜೂನ್ 5 ರಂದು ದೆಹಲಿಗೆ ತೆರಳಿದ್ದಾರೆ. ಇದನ್ನೂ ಓದಿ: ಸಚಿವ ಬಿ. ನಾಗೇಂದ್ರಗೆ ಸಿಬಿಐ ನೋಟಿಸ್ ನೀಡುವ ಸಾಧ್ಯತೆ..!

ಯೆಸ್… ಗೆಲುವಿನ ಅಲೆಯಲ್ಲಿ ತೇಲುತ್ತಿರುವ ಕುಮಾರಸ್ವಾಮಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಬುಲಾವ್ ಮೇರೆಗೆ ಇಂದು ದೆಹಲಿಗೆ ತೆರಳಿದರು. ಎನ್ ಡಿಎ ಮೈತ್ರಿಕೂಟದ ಎಲ್ಲ ಪಕ್ಷಗಳ ಸಭೆಯನ್ನು ಕರೆಯಲಾಗಿದೆ, ಅದರಲ್ಲಿ ಪಾಲ್ಗೊಳ್ಳಲು ಹೋಗುತ್ತಿರುವುದಾಗಿ ವಿಮಾನ ನಿಲ್ದಾಣ ತಲುಪುವ ಧಾವಂತದಲ್ಲಿದ್ದ ಕುಮಾರಸ್ವಾಮಿ ಹೇಳಿದರು.

ಈ ದೇಶದ ಜನತೆಗೆ ಕಾಡುತ್ತಿರುವ ಪ್ರಶ್ನೆ ಎಂದರೆ ಅದು ಮುಂದಿನ ಪ್ರಧಾನಿ ಯಾರೆಂಬ ಪ್ರಶ್ನೆ. ಈ ಪ್ರಶ್ನೆಗೆ ಇದೀಗ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಉತ್ತರ ನೀಡಿದ್ದಾರೆ. ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ಸರ್ಕಾರವೇ ರಚನೆಯಾಗೋದು ಅಂತ ಹೇಳಿದರು.

Related