ಲೋಕಸಮರಕ್ಕೆ ತುಮಕೂರು ಕ್ಷೇತ್ರದಿಂದ ಸ್ಪರ್ಧೆ ಮಾಡುವ ಬಗ್ಗೆ ಸೋಮಣ್ಣ ಹೇಳಿದ್ದೇನು

ಲೋಕಸಮರಕ್ಕೆ ತುಮಕೂರು ಕ್ಷೇತ್ರದಿಂದ ಸ್ಪರ್ಧೆ ಮಾಡುವ ಬಗ್ಗೆ ಸೋಮಣ್ಣ ಹೇಳಿದ್ದೇನು

ನವದೆಹಲಿ: ಲೋಕಸಮರ ಸಮೀಪಿಸುತ್ತಿದ್ದಂತೆ ಕರ್ನಾಟಕ ರಾಜ್ಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿದ್ದು, ತುಮಕೂರಿನ ಕ್ಷೇತ್ರದಲ್ಲಿ ವಿ ಸೋಮಣ್ಣ ಅವರು ಸ್ಪರ್ಧೆ ಮಾಡುತ್ತಾರೆ ಎಂಬ ಊಹಾಪೋಹಗಳಿಗೆ ಅವರೇ ಇಂದು ಸ್ಪಷ್ಟ ಮಾಹಿತಿಯನ್ನು ನೀಡಿದ್ದಾರೆ

ಇಂದು ನವ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್ ಲೋಕಸಭಾ ಚುನಾವಣೆಗೆ ನನ್ನನ್ನು ತುಮಕೂರು ಕ್ಷೇತ್ರದಿಂದ ಸ್ಪರ್ಧೆ ಮಾಡು ಎಂದು ಹೇಳಿದರೆ ನಾನು ಖಂಡಿತವಾಗಿಯೂ ತುಮಕೂರು ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದರು.

ಇನ್ನು ತುಮಕೂರು ಹಾಲಿ ಸಂಸದ ಜಿ.ಎಸ್.ಬಸವರಾಜ್ ನನಗೆ ಆತ್ಮೀಯರು. ತುಮಕೂರು ಕ್ಷೇತ್ರಕ್ಕೆ ನಾನು ಬರಬೇಕೆಂದು ಅವರ ಭಾವನೆಯಾಗಿದೆ. ಸಾಧ್ಯವಾದರೆ ನಾನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗುತ್ತೆನೆ ಎಂದರು.

ಮಾಜಿ ಸಚಿವ ಕೆ.ಸುಧಾಕರ್ ಸ್ಪರ್ಧೆ ಮಾಡುವ ಬಗ್ಗೆ ಹೇಳಿಕೆ ವಿಚಾರವಾಗಿ ಮಾತನಾಡಿದ ಸೋಮಣ್ಣ, ನನಗೆ ಆ ಬಗ್ಗೆ ಮಾಹಿತಿ ಇಲ್ಲ. ಸುಧಾಕರ್ ಏನು ಹೇಳಿದ್ದಾರೆ ಅಂತ ನನಗೆ ಗೊತ್ತಿಲ್ಲ. ಗೊತ್ತಿಲ್ಲದೆ ಮಾತಾಡುವುದು ಸರಿಯಲ್ಲ ಎಂದರು. ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಕಾರ್ಯಕರ್ತರು ಇದ್ದಾರೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಮತ್ತೆ ಸರ್ಕಾರ ಬರಬೇಕೆಂದು ಎಲ್ಲರ ಇಚ್ಛೆಯಾಗಿದೆ. ಭಾರತೀಯ ಜನತಾ ಪಕ್ಷದ ಬೇರು ಗಟ್ಟಿ ಇದೆ ಎಂದರು

 

Related