ಶಾಮನೂರು ಶಿವಶಂಕರಪ್ಪಅವರ ಹೇಳಿಕೆಗೆ ಯಡಿಯೂರಪ್ಪ ಹೇಳಿದ್ದೇನು?

ಶಾಮನೂರು ಶಿವಶಂಕರಪ್ಪಅವರ ಹೇಳಿಕೆಗೆ ಯಡಿಯೂರಪ್ಪ ಹೇಳಿದ್ದೇನು?

ಬೆಂಗಳೂರು: ನಿನ್ನೆ ಶಿವಮೊಗ್ಗದಲ್ಲಿ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ನ ಶಾಸಕ ಶಾಮನೂರ್ ಶಿವಶಂಕರಪ್ಪ ಅವರು ಬಿಜೆಪಿಯ ಸಂಸದ ಬಿ ವೈ ರಾಘವೇಂದ್ರ ಮತ್ತೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಬೇಕೆಂದು ಹೇಳಿದ್ದರು.

ಇನ್ನು ಈ ಸಂಬಂಧ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಶಾಮನೂರು ಶಿವಶಂಕರಪ್ಪ ಅವರು ಸಮಾಜದ ಹಿರಿಯ ಮುಖಂಡರುಗಳು ಅವರಂತ ಆಶೀರ್ವಾದ ನಮ್ಮ ಬಿಜೆಪಿ ನಾಯಕರಗಳ ಮೇಲೆ ಇದ್ದರೆ ಲೋಕಸಭಾ ಚುನಾವಣೆಯಲ್ಲಿ ಮತ್ತೆ ನಾವೇ ಅಧಿಕಾರದ ಗದ್ದುಗೆ ಏರುತ್ತೇವೆ ಎಂದು ಹೇಳಿದರು.

ಶಿವಮೊಗ್ಗ ಕ್ಷೇತ್ರದಲ್ಲಿ ಬಿ ವೈ ರಾಘವೇಂದ್ರ ಅವರು ಅಭಿವೃದ್ಧಿ ಕೆಲಸವನ್ನು ಶಾಮನೂರು ಶಿವಶಂಕರಪ್ಪ ಅವರು ಹಾಡಿ ಹೊಗಳಿದ್ದಾರೆ, ಇದು ರಾಘವೇಂದ್ರ ಅವರ ಪಾಲಿಗೆ ಆಶೀರ್ವಾದ ಎಂದು ಹೇಳಿದರು. ರಾಘವೇಂದ್ರ ಮಾಡಿರುವ ಕೆಲಸ ಮೆಚ್ಚಿ ಅವರನ್ನು ಪುನರಾಯ್ಕೆ ಮಾಡಬೇಕೆಂದು ಹೇಳಿರೋದು ನಮ್ಮ ಸಮಾಜದ ಬಂಧುಗಳಿಗೆ, ಕಾರ್ಯಕರ್ತರಿಗೆ ಸಂತೋಷ ತಂದಿದೆ ಎಂದರು.

 

Related